ಬೆಂಗಳೂರು: ‘ದಿ ಕಾಶ್ಮೀರ್ ಫೈಲ್ಸ್‘ ಸಿನಿಮಾವನ್ನು ಉಚಿತವಾಗಿ ಪ್ರದರ್ಶನ ಮಾಡುವುದನ್ನು ನಿಲ್ಲಿಸಬೇಕು ಎಂದು ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.
ಹರಿಯಾಣ ಸಿಎಂ ಅವರನ್ನು ಉದ್ದೇಶಿಸಿ ಟ್ವೀಟ್ ಮಾಡಿರುವ ಅಗ್ನಿಹೋತ್ರಿ, ಚಿತ್ರವನ್ನು ಉಚಿತವಾಗಿ ಪ್ರದರ್ಶನ ಮಾಡುವುದನ್ನು ನಿಲ್ಲಿಸಿ. ಹಾಗೆ ಮಾಡುವುದು ಕ್ರಿಮಿನಲ್ ಅಪರಾಧವಾಗಿದೆ. ರಾಜಕೀಯ ನಾಯಕರು ಉದ್ಯಮವನ್ನು ಪ್ರೋತ್ಸಾಹಿಸಬೇಕು, ಅದರ ಹೊರತು ಉಚಿತ ಟಿಕೆಟ್ ಹಂಚಬಾರದು ಎಂದು ವಿನಂತಿಸಿಕೊಂಡಿದ್ದಾರೆ.
ರಾಜಕೀಯ ನಾಯಕರು ವಿವಿಧ ಕಡೆಗಳಲ್ಲಿ ಚಿತ್ರದ ಉಚಿತ ಪ್ರದರ್ಶನ ಆಯೋಜಿಸುತ್ತಿದ್ದಾರೆ. ಉಚಿತವಾಗಿ ಸಿನಿಮಾಪ್ರದರ್ಶನ ಮಾಡುವುದು ಸರಿಯಲ್ಲ ಎಂದು ನಿರ್ದೇಶಕರು ಹೇಳಿದ್ದಾರೆ.
WARNING: Showing #TheKashmirFiles like this in open and free is a CRIMINAL OFFENCE. Dear @mlkhattar ji, I’d request you to stop this. Political leaders must respect creative business and true Nationalism and Social service means buying tickets in a legal and peaceful manner. 🙏 pic.twitter.com/b8yGqdrmUh
— Vivek Ranjan Agnihotri (@vivekagnihotri) March 20, 2022
ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ಕರ್ನಾಟಕ ಸೇರಿದಂತೆ ಉತ್ತರ ಪ್ರದೇಶ, ತ್ರಿಪುರಾ, ಗೋವಾ, ಹರಿಯಾಣ, ಗುಜರಾತ್ ಮತ್ತು ಉತ್ತರಾಖಂಡದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ.