<p><strong>ಮಂಗಳೂರು: </strong>ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಿರ್ದೇಶಕಿ, ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರಿನ ಜೆಎಂಎಫ್ಸಿ ಐದನೇ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.</p>.<p>‘ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಯಿಂದ ಪದ್ಮಜಾ ರಾವ್ ಅವರು 2018ರಿಂದ ಹಂತಹಂತವಾಗಿ ₹ 41 ಲಕ್ಷ ಸಾಲವನ್ನು ಪಡೆದಿದ್ದರು. ಬ್ಯಾಂಕ್ ಖಾತೆಯ ಮೂಲಕವೇ ಹಣ ವರ್ಗಾವಣೆಯಾಗಿದೆ. ಸಾಲದ ಭದ್ರತೆಗಾಗಿ ₹ 40 ಲಕ್ಷದ ಚೆಕ್ ಅನ್ನು ಪದ್ಮಜಾ ರಾವ್ ನೀಡಿದ್ದರು. ಸಾಲ ವಾಪಸ್ ಕೊಡದಿದ್ದಾಗ ಚೆಕ್ ಅನ್ನು ನಗದೀಕರಣಕ್ಕೆ ಹಾಕಲಾಗಿತ್ತು. ಅವರ ಖಾತೆಯಲ್ಲಿ ಹಣವಿಲ್ಲದೆ ಬೌನ್ಸ್ ಆಗಿದೆ. ಈ ಸಂಬಂಧ ದೂರು ನೀಡಲಾಗಿತ್ತು’ ಎಂದು ಪ್ರೊಡಕ್ಷನ್ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಕಾವೂರು ತಿಳಿಸಿದ್ದಾರೆ.</p>.<p>‘ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಪದ್ಮಜಾ ಅವರಿಗೆ ಸಮನ್ಸ್ ನೀಡಿದರೂ ಅದನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ, ಫೆ.3ರಂದು ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ. ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆಗೆ ವಾರಂಟ್ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಿರ್ದೇಶಕಿ, ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರಿನ ಜೆಎಂಎಫ್ಸಿ ಐದನೇ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.</p>.<p>‘ಮಂಗಳೂರಿನ ವೀರೂ ಟಾಕೀಸ್ ಪ್ರೊಡಕ್ಷನ್ ಸಂಸ್ಥೆಯಿಂದ ಪದ್ಮಜಾ ರಾವ್ ಅವರು 2018ರಿಂದ ಹಂತಹಂತವಾಗಿ ₹ 41 ಲಕ್ಷ ಸಾಲವನ್ನು ಪಡೆದಿದ್ದರು. ಬ್ಯಾಂಕ್ ಖಾತೆಯ ಮೂಲಕವೇ ಹಣ ವರ್ಗಾವಣೆಯಾಗಿದೆ. ಸಾಲದ ಭದ್ರತೆಗಾಗಿ ₹ 40 ಲಕ್ಷದ ಚೆಕ್ ಅನ್ನು ಪದ್ಮಜಾ ರಾವ್ ನೀಡಿದ್ದರು. ಸಾಲ ವಾಪಸ್ ಕೊಡದಿದ್ದಾಗ ಚೆಕ್ ಅನ್ನು ನಗದೀಕರಣಕ್ಕೆ ಹಾಕಲಾಗಿತ್ತು. ಅವರ ಖಾತೆಯಲ್ಲಿ ಹಣವಿಲ್ಲದೆ ಬೌನ್ಸ್ ಆಗಿದೆ. ಈ ಸಂಬಂಧ ದೂರು ನೀಡಲಾಗಿತ್ತು’ ಎಂದು ಪ್ರೊಡಕ್ಷನ್ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಕಾವೂರು ತಿಳಿಸಿದ್ದಾರೆ.</p>.<p>‘ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಪದ್ಮಜಾ ಅವರಿಗೆ ಸಮನ್ಸ್ ನೀಡಿದರೂ ಅದನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ, ಫೆ.3ರಂದು ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ’ ಎಂದು ಹೇಳಿದ್ದಾರೆ. ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣೆಗೆ ವಾರಂಟ್ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>