<p><strong>ಬೆಂಗಳೂರು</strong>: ನಟ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಕೆಲವು ಅಭಿಮಾನಿಗಳು ತಮ್ಮ ಇಷ್ಟದ ಈ ನಟನನ್ನು ಕಂಡು ಕೆಲವೊಮ್ಮೆ ಅತಿರೇಕತನದಿಂದ ವರ್ತಿಸುತ್ತಾರೆ.</p>.<p>ಇಂತಹ ಘಟನೆಗಳನ್ನು ಪವನ್ ಕಲ್ಯಾಣ್ ಅಗಾಗ ಎದುರಿಸುತ್ತರಾದರೂ ಇವತ್ತೊಂದು ಗಂಭೀರ ಘಟನೆ ನಡೆದಿದೆ.</p>.<p>ಆಂಧ್ರಪ್ರದೇಶದ ನರಸಾಪುರ ಎಂಬಲ್ಲಿ ಜನಸೇನಾ ಪಕ್ಷದ ಬಹಿರಂಗ ಸಮಾವೇಶ ನಡೆಸುವ ವೇಳೆ ಪವನ್ ಕಲ್ಯಾಣ್ ಅವರು ಕಾರ್ನ ಚಾವಡಿ ಮೇಲೆ ನಿಂತು ಅಭಿಮಾನಿಗಳತ್ತ ಕೈ ಬೀಸುತ್ತಿದ್ದರು. ನಂತರ ಕಾರ್ ಮೇಲೆ ಬಂದು ಕೈ ಬೀಸಲು ಪ್ರಾರಂಭಿಸಿದರು.</p>.<p>ಆದರೆ, ಈ ವೇಳೆ ಅಭಿಮಾನಿಯೊಬ್ಬ ಹುಚ್ಚುತನದಿಂದ ವರ್ತಿಸಿದ್ದಾನೆ. ಕಾರ್ ಮೇಲೆ ಪವನ್ ಕಲ್ಯಾಣ್ ಅವರು ನಿಂತಿದ್ದಾಗ ಓಡೋಡಿ ಬಂದು ಅವರನ್ನು ತಬ್ಬಿಕೊಳ್ಳಲು ನೋಡಿದ್ದಾನೆ. ಇದರಿಂದ ಗಲಿಬಿಲಿಗೊಂಡು ತಪ್ಪಿಸಿಕೊಳ್ಳಲು ನೋಡಿದ ನಟ ಕೂಡಲೇ ಕುಸಿದು ಬಿದ್ದರು.</p>.<p>ನಂತರ ಸಾವರಿಸಿಕೊಂಡ ಪವನ್ ಕಲ್ಯಾಣ್ ಘಟನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಅಭಿಮಾನಿಯ ಅತಿರೇಕದ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿದೆ. ಪವನ್ ಅವರು ಪ್ರಾಥಮಿಕ ಚಿಕಿತ್ಸೆ ಪಡೆದು ಅಲ್ಲಿಂದ ತೆರಳಿದ್ದಾರೆ.</p>.<p>ಇನ್ನು ಪವನ್ ಕಲ್ಯಾಣ್ ಅವರ ಬಹು ನಿರೀಕ್ಷಿತ ಭೀಮ್ಲಾ ನಾಯಕ್ ಇದೇ ಫೆಬ್ರುವರಿ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.</p>.<p><a href="https://www.prajavani.net/entertainment/cinema/amitabh-bachchan-gives-best-compliments-for-actor-prabhs-home-made-food-912943.html" itemprop="url">‘ಬಾಹುಬಲಿ’ ಪ್ರಭಾಸ್ರನ್ನು ಹಾಡಿ ಹೊಗಳಿದ ಬಿಗ್ ಬಿ ಅಮಿತಾಭ್: ಕಾರಣ ಇಲ್ಲಿದೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಟ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ. ಕೆಲವು ಅಭಿಮಾನಿಗಳು ತಮ್ಮ ಇಷ್ಟದ ಈ ನಟನನ್ನು ಕಂಡು ಕೆಲವೊಮ್ಮೆ ಅತಿರೇಕತನದಿಂದ ವರ್ತಿಸುತ್ತಾರೆ.</p>.<p>ಇಂತಹ ಘಟನೆಗಳನ್ನು ಪವನ್ ಕಲ್ಯಾಣ್ ಅಗಾಗ ಎದುರಿಸುತ್ತರಾದರೂ ಇವತ್ತೊಂದು ಗಂಭೀರ ಘಟನೆ ನಡೆದಿದೆ.</p>.<p>ಆಂಧ್ರಪ್ರದೇಶದ ನರಸಾಪುರ ಎಂಬಲ್ಲಿ ಜನಸೇನಾ ಪಕ್ಷದ ಬಹಿರಂಗ ಸಮಾವೇಶ ನಡೆಸುವ ವೇಳೆ ಪವನ್ ಕಲ್ಯಾಣ್ ಅವರು ಕಾರ್ನ ಚಾವಡಿ ಮೇಲೆ ನಿಂತು ಅಭಿಮಾನಿಗಳತ್ತ ಕೈ ಬೀಸುತ್ತಿದ್ದರು. ನಂತರ ಕಾರ್ ಮೇಲೆ ಬಂದು ಕೈ ಬೀಸಲು ಪ್ರಾರಂಭಿಸಿದರು.</p>.<p>ಆದರೆ, ಈ ವೇಳೆ ಅಭಿಮಾನಿಯೊಬ್ಬ ಹುಚ್ಚುತನದಿಂದ ವರ್ತಿಸಿದ್ದಾನೆ. ಕಾರ್ ಮೇಲೆ ಪವನ್ ಕಲ್ಯಾಣ್ ಅವರು ನಿಂತಿದ್ದಾಗ ಓಡೋಡಿ ಬಂದು ಅವರನ್ನು ತಬ್ಬಿಕೊಳ್ಳಲು ನೋಡಿದ್ದಾನೆ. ಇದರಿಂದ ಗಲಿಬಿಲಿಗೊಂಡು ತಪ್ಪಿಸಿಕೊಳ್ಳಲು ನೋಡಿದ ನಟ ಕೂಡಲೇ ಕುಸಿದು ಬಿದ್ದರು.</p>.<p>ನಂತರ ಸಾವರಿಸಿಕೊಂಡ ಪವನ್ ಕಲ್ಯಾಣ್ ಘಟನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಅಭಿಮಾನಿಯ ಅತಿರೇಕದ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗಿದೆ. ಪವನ್ ಅವರು ಪ್ರಾಥಮಿಕ ಚಿಕಿತ್ಸೆ ಪಡೆದು ಅಲ್ಲಿಂದ ತೆರಳಿದ್ದಾರೆ.</p>.<p>ಇನ್ನು ಪವನ್ ಕಲ್ಯಾಣ್ ಅವರ ಬಹು ನಿರೀಕ್ಷಿತ ಭೀಮ್ಲಾ ನಾಯಕ್ ಇದೇ ಫೆಬ್ರುವರಿ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.</p>.<p><a href="https://www.prajavani.net/entertainment/cinema/amitabh-bachchan-gives-best-compliments-for-actor-prabhs-home-made-food-912943.html" itemprop="url">‘ಬಾಹುಬಲಿ’ ಪ್ರಭಾಸ್ರನ್ನು ಹಾಡಿ ಹೊಗಳಿದ ಬಿಗ್ ಬಿ ಅಮಿತಾಭ್: ಕಾರಣ ಇಲ್ಲಿದೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>