ಬಿದರಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ವೃತ್ತಿಬದುಕಿನಲ್ಲಿ ಹಲವು ಮೈಲುಗಲ್ಲು ಮುಟ್ಟಿದ ಹಿರಿಮೆ ಹೊಂದಿದ್ದಾರೆ. 1993ರಲ್ಲಿ ನರಹಂತಕ ವೀರಪ್ಪನ್ ವಿರುದ್ಧದ ಕಾರ್ಯಾಚರಣೆಗೆ ನಿಯೋಜನೆಗೊಂಡಿದ್ದ ವಿಶೇಷ ಕಾರ್ಯಪಡೆಯ ನೇತೃತ್ವವಹಿಸಿದ್ದರು. ಕಾಡುಗಳ್ಳನ ಬಲವನ್ನು ಕುಗ್ಗಿಸಿದ ಹೆಗ್ಗಳಿಕೆ ಅವರದು.