ಬೆಂಗಳೂರು, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಜಿ.ನಟರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದಾರೆ. ಅಗಸ್ತ್ಯ ಕ್ರಿಯೇಷನ್ಸ್ ಮೂಲಕ ಟಿ.ವೆಂಕಟಾಚಲಯ್ಯ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಾಮ್ ಚೇತನ್ ಅವರು ಈ ಚಿತ್ರದ ನಾಯಕ, ಮಯೂರಿ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ.