<p>ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳ ಯಶಸ್ಸಿನ ಬಳಿಕ ನಟ ಪ್ರಭಾಸ್ ಪ್ಯಾನ್ ಇಂಡಿಯಾ ಇಮೇಜ್ ಸೃಷ್ಟಿಸಿಕೊಂಡಿದ್ದರು. ಆ ನಂತರ ಪ್ರಭಾಸ್ ಕೇವಲ ಪ್ಯಾನ್ ಇಂಡಿಯಾ ಸಿನಿಮಾಗಳ ಮೇಲಷ್ಟೇ ಗಮನ ಹರಿಸಿದ್ದರು.</p>.<p>ಈಗ ಬಾಲಿವುಡ್ ನಿರ್ದೇಶಕ ಓಂ ರಾವತ್ ಸಾರಥ್ಯದಲ್ಲಿ ಪ್ರಭಾಸ್ ‘ಆದಿಪುರುಷ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾವು ಹಿಂದೂ ಮಹಾಕಾವ್ಯ ರಾಮಾಯಣ ಆಧಾರಿತವಾಗಿದ್ದು ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ.</p>.<p>ಆದರೆ ಪ್ರಭಾಸ್ಗೆ ಈ ಸಿನಿಮಾ ಕಂಟಕವಾಗುವ ಸಾಧ್ಯತೆ ಇದೆ ಎನ್ನುತ್ತಿವೆ ಕೆಲ ಮೂಲಗಳು.ಕಾರಣವೆಂದರೆ, ರಾಮ ಹಾಗೂ ರಾವಣರ ಕಥೆಯನ್ನು ಹೊಂದಿರುವ ಇನ್ನೊಂದು ಸಿನಿಮಾ ಕೂಡ ಬರಲಿದೆ. ಆ ಚಿತ್ರಕ್ಕೆ ‘ರಾಮ ಸೇತು’ ಎಂದು ಹೆಸರಿಸಲಾಗಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗೆ ಈ ಚಿತ್ರವನ್ನು ಘೋಷಿಸಿದ್ದರು. ‘ಇದು ರಾಮ ಹಾಗೂ ರಾವಣರ ನಡುವೆ ನಡೆಯುವ ಯದ್ಧದ ಕತೆಯನ್ನು ಹೊಂದಿದ ಚಿತ್ರ’ ಎಂದಿದ್ದಾರೆ ಅಕ್ಷಯ್ ಕುಮಾರ್.</p>.<p>ಈ ಸಿನಿಮಾದ ಶೂಟಿಂಗ್ ಅಯೋಧ್ಯೆಯಲ್ಲೇ ನಡೆಯಲಿದ್ದು ಅಕ್ಷಯ್ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಒಪ್ಪಿಗೆ ಪಡೆದಿದ್ದಾರೆ ಎನ್ನಲಾಗುತ್ತಿದೆ.</p>.<p>ಒಂದು ವೇಳೆ ರಾಮಸೇತು ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ಯಶಸ್ವಿಯಾದರೆ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾಕ್ಕೆ ಹಿನ್ನಡೆಯಾಗುವುದು ಪಕ್ಕಾ ಎನ್ನುತ್ತಿವೆ ಮೂಲಗಳು. ಆದಿಪುರುಷ್ ಸಿನಿಮಾದ ಶೂಟಿಂಗ್ 2021ರ ಜನವರಿಯಲ್ಲಿ ಆರಂಭವಾಗುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ನಿರ್ದೇಶನದ ಬಾಹುಬಲಿ ಸರಣಿ ಸಿನಿಮಾಗಳ ಯಶಸ್ಸಿನ ಬಳಿಕ ನಟ ಪ್ರಭಾಸ್ ಪ್ಯಾನ್ ಇಂಡಿಯಾ ಇಮೇಜ್ ಸೃಷ್ಟಿಸಿಕೊಂಡಿದ್ದರು. ಆ ನಂತರ ಪ್ರಭಾಸ್ ಕೇವಲ ಪ್ಯಾನ್ ಇಂಡಿಯಾ ಸಿನಿಮಾಗಳ ಮೇಲಷ್ಟೇ ಗಮನ ಹರಿಸಿದ್ದರು.</p>.<p>ಈಗ ಬಾಲಿವುಡ್ ನಿರ್ದೇಶಕ ಓಂ ರಾವತ್ ಸಾರಥ್ಯದಲ್ಲಿ ಪ್ರಭಾಸ್ ‘ಆದಿಪುರುಷ್’ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾವು ಹಿಂದೂ ಮಹಾಕಾವ್ಯ ರಾಮಾಯಣ ಆಧಾರಿತವಾಗಿದ್ದು ಬಾಲಿವುಡ್ ನಟ ಸೈಫ್ ಅಲಿ ಖಾನ್ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ.</p>.<p>ಆದರೆ ಪ್ರಭಾಸ್ಗೆ ಈ ಸಿನಿಮಾ ಕಂಟಕವಾಗುವ ಸಾಧ್ಯತೆ ಇದೆ ಎನ್ನುತ್ತಿವೆ ಕೆಲ ಮೂಲಗಳು.ಕಾರಣವೆಂದರೆ, ರಾಮ ಹಾಗೂ ರಾವಣರ ಕಥೆಯನ್ನು ಹೊಂದಿರುವ ಇನ್ನೊಂದು ಸಿನಿಮಾ ಕೂಡ ಬರಲಿದೆ. ಆ ಚಿತ್ರಕ್ಕೆ ‘ರಾಮ ಸೇತು’ ಎಂದು ಹೆಸರಿಸಲಾಗಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗೆ ಈ ಚಿತ್ರವನ್ನು ಘೋಷಿಸಿದ್ದರು. ‘ಇದು ರಾಮ ಹಾಗೂ ರಾವಣರ ನಡುವೆ ನಡೆಯುವ ಯದ್ಧದ ಕತೆಯನ್ನು ಹೊಂದಿದ ಚಿತ್ರ’ ಎಂದಿದ್ದಾರೆ ಅಕ್ಷಯ್ ಕುಮಾರ್.</p>.<p>ಈ ಸಿನಿಮಾದ ಶೂಟಿಂಗ್ ಅಯೋಧ್ಯೆಯಲ್ಲೇ ನಡೆಯಲಿದ್ದು ಅಕ್ಷಯ್ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಒಪ್ಪಿಗೆ ಪಡೆದಿದ್ದಾರೆ ಎನ್ನಲಾಗುತ್ತಿದೆ.</p>.<p>ಒಂದು ವೇಳೆ ರಾಮಸೇತು ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ಯಶಸ್ವಿಯಾದರೆ ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾಕ್ಕೆ ಹಿನ್ನಡೆಯಾಗುವುದು ಪಕ್ಕಾ ಎನ್ನುತ್ತಿವೆ ಮೂಲಗಳು. ಆದಿಪುರುಷ್ ಸಿನಿಮಾದ ಶೂಟಿಂಗ್ 2021ರ ಜನವರಿಯಲ್ಲಿ ಆರಂಭವಾಗುವ ನಿರೀಕ್ಷೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>