ಕೋವಿಡ್ ಲಾಕ್ಡೌನ್ ವೇಳೆ ವಲಸೆ ಕಾರ್ಮಿಕರಿಗೆ ತವರಿಗೆ ಮರಳಲು ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದ ಸೋನು ಸೂದ್, ರೈತರ ಪ್ರತಿಭಟನೆ ವಿಚಾರದಲ್ಲಿ ಚರ್ಚೆ ನಡೆಸಲು ಬಯಸುವುದಿಲ್ಲ ಎಂದಿದ್ದಾರೆ. ಯಾರು ಸರಿ, ಯಾರು ತಪ್ಪು ಎಂದು ಚರ್ಚಿಸುವುದಿಲ್ಲ. ರೈತರ ಸಮಸ್ಯೆಗಳಿಗೆ ಸಕಾಲಿಕ ಪರಿಹಾರ ದೊರೆತರೆ ಸಾಕು ಎಂದು ಹೇಳಿದ್ದಾರೆ.