<p><strong>ಹೈದರಾಬಾದ್</strong>: ಪುಷ್ಪ–2 ಚಿತ್ರ ಪ್ರೀಮಿಯರ್ ಪ್ರದರ್ಶನದ ವೇಳೆ ನಡೆದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದಾರೆ.</p><p>ಹೈದರಾಬಾದ್ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು.</p><p>ಈಗ ಅಲ್ಲು ಅರ್ಜುನ್ ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ, ಅರ್ಜಿಯ ವಿಲೇವಾರಿಗೆ ಬಾಕಿ ಉಳಿದಿರುವ ಪ್ರಕ್ರಿಯೆ ಮತ್ತು ಬಂಧನಕ್ಕೆ ತಡೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋರ್ಟ್ ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.</p><p>ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಲ್ಲು ಅರ್ಜುನ್ ಅವರು ಮೃತ ಮಹಿಳೆಯ ಕುಟುಂಬಕ್ಕೆ ₹25 ಲಕ್ಷ ಹಣಕಾಸಿನ ನೆರವು ನೀಡುವುದಾಗಿ ಘೋಷಿಸಿದ್ದಾರೆ.</p>.ಪುಷ್ಪ-2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲು; ತಾಯಿ ಸಾವು, ಮಗುವಿಗೆ ಗಾಯ.ಪುಷ್ಪ 2 ಚಿತ್ರ ನೋಡಲು ಹೋದ ವ್ಯಕ್ತಿಯ ಮೃತದೇಹ ಚಿತ್ರಮಂದಿರದಲ್ಲಿ ಪತ್ತೆ.ನಾನು ಅಲ್ಲು ಅರ್ಜುನ್ ಅಪ್ಪಟ ಅಭಿಮಾನಿ: ಬಾಲಿವುಡ್ ನಟ ಅಮಿತಾಬ್ ಬಚ್ಚನ್.ಭಾಷೆಗಳ ಗಡಿಗಳನ್ನು ಮೀರಿದ ‘ಪುಷ್ಪ 2: ದಿ ರೂಲ್’; ಅಲ್ಲು ಅರ್ಜುನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಪುಷ್ಪ–2 ಚಿತ್ರ ಪ್ರೀಮಿಯರ್ ಪ್ರದರ್ಶನದ ವೇಳೆ ನಡೆದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್ ಮೊರೆ ಹೋಗಿದ್ದಾರೆ.</p><p>ಹೈದರಾಬಾದ್ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು.</p><p>ಈಗ ಅಲ್ಲು ಅರ್ಜುನ್ ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ, ಅರ್ಜಿಯ ವಿಲೇವಾರಿಗೆ ಬಾಕಿ ಉಳಿದಿರುವ ಪ್ರಕ್ರಿಯೆ ಮತ್ತು ಬಂಧನಕ್ಕೆ ತಡೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೋರ್ಟ್ ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.</p><p>ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಲ್ಲು ಅರ್ಜುನ್ ಅವರು ಮೃತ ಮಹಿಳೆಯ ಕುಟುಂಬಕ್ಕೆ ₹25 ಲಕ್ಷ ಹಣಕಾಸಿನ ನೆರವು ನೀಡುವುದಾಗಿ ಘೋಷಿಸಿದ್ದಾರೆ.</p>.ಪುಷ್ಪ-2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲು; ತಾಯಿ ಸಾವು, ಮಗುವಿಗೆ ಗಾಯ.ಪುಷ್ಪ 2 ಚಿತ್ರ ನೋಡಲು ಹೋದ ವ್ಯಕ್ತಿಯ ಮೃತದೇಹ ಚಿತ್ರಮಂದಿರದಲ್ಲಿ ಪತ್ತೆ.ನಾನು ಅಲ್ಲು ಅರ್ಜುನ್ ಅಪ್ಪಟ ಅಭಿಮಾನಿ: ಬಾಲಿವುಡ್ ನಟ ಅಮಿತಾಬ್ ಬಚ್ಚನ್.ಭಾಷೆಗಳ ಗಡಿಗಳನ್ನು ಮೀರಿದ ‘ಪುಷ್ಪ 2: ದಿ ರೂಲ್’; ಅಲ್ಲು ಅರ್ಜುನ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>