<p><strong>ಮಧ್ಯಪ್ರದೇಶ:</strong> ಚಂದನವನದ ನಟ ಯಶ್ ಅವರು ಉಜ್ಜಯಿನಿ ಮಹಾಕಾಳೇಶ್ವರ ದೇಗುಲದಲ್ಲಿ ಆರತಿ ಬೆಳಗಿ, ಪೂಜೆ ಸಲ್ಲಿಸಿದ್ದಾರೆ. ಜತೆಗೆ ಬೆಳಗಿನ ಜಾವ ನಡೆಯುವ ಭಸ್ಮಾರತಿಯಲ್ಲಿ ಯಶ್ ಪಾಲ್ಗೊಂಡಿದ್ದರು</p><p>ಸುದ್ದಿ ಸಂಸ್ಥೆ ಎನ್ಐಎ ಜತೆಗೆ ಮಾತನಾಡಿರುವ ಅವರು, ‘ನಾನು ಶಿವನ ಭಕ್ತ, ಶಿವನಿಗೆ ಪೂಜೆ ಮಾಡಿರುವುದು ಖುಷಿ ಎನಿಸಿದೆ, ಆಶೀರ್ವಾದ ಪಡೆದಿದ್ದೇನೆ. ಜತೆಗೆ ಎಲ್ಲರ ಖುಷಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದೇನೆ’ ಎಂದು ಹೇಳಿದ್ದಾರೆ.</p><p>ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ರಾಮಾಯಣ’ ಚಿತ್ರದಲ್ಲಿ ಯಶ್ ನಟಿಸುತ್ತಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಶ್ ಉಜ್ಜಯಿನಿ ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.</p><p>ಭಾನುವಾರ ಗಾಯಕ ಅರಿಜಿತ್ ಸಿಂಗ್ ದಂಪತಿ ಮಹಾಕಾಳೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದರು. ಭಸ್ಮಾರತಿಯಲ್ಲಿ ಭಾಗಿಯಾಗಿ ಪೂಜೆ ಸಲ್ಲಿಸಿದ್ದರು.</p><p>ಮಹಾಕಾಳೇಶ್ವರನಿಗೆ ಪ್ರತಿದಿನ ಬೆಳಿಗ್ಗೆ 3.30ರಿಂದ 5.30ರವರೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಭಸ್ಮಾರತಿ ಮಾಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧ್ಯಪ್ರದೇಶ:</strong> ಚಂದನವನದ ನಟ ಯಶ್ ಅವರು ಉಜ್ಜಯಿನಿ ಮಹಾಕಾಳೇಶ್ವರ ದೇಗುಲದಲ್ಲಿ ಆರತಿ ಬೆಳಗಿ, ಪೂಜೆ ಸಲ್ಲಿಸಿದ್ದಾರೆ. ಜತೆಗೆ ಬೆಳಗಿನ ಜಾವ ನಡೆಯುವ ಭಸ್ಮಾರತಿಯಲ್ಲಿ ಯಶ್ ಪಾಲ್ಗೊಂಡಿದ್ದರು</p><p>ಸುದ್ದಿ ಸಂಸ್ಥೆ ಎನ್ಐಎ ಜತೆಗೆ ಮಾತನಾಡಿರುವ ಅವರು, ‘ನಾನು ಶಿವನ ಭಕ್ತ, ಶಿವನಿಗೆ ಪೂಜೆ ಮಾಡಿರುವುದು ಖುಷಿ ಎನಿಸಿದೆ, ಆಶೀರ್ವಾದ ಪಡೆದಿದ್ದೇನೆ. ಜತೆಗೆ ಎಲ್ಲರ ಖುಷಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದ್ದೇನೆ’ ಎಂದು ಹೇಳಿದ್ದಾರೆ.</p><p>ಬಾಲಿವುಡ್ ನಿರ್ದೇಶಕ ನಿತೇಶ್ ತಿವಾರ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ರಾಮಾಯಣ’ ಚಿತ್ರದಲ್ಲಿ ಯಶ್ ನಟಿಸುತ್ತಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಶ್ ಉಜ್ಜಯಿನಿ ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.</p><p>ಭಾನುವಾರ ಗಾಯಕ ಅರಿಜಿತ್ ಸಿಂಗ್ ದಂಪತಿ ಮಹಾಕಾಳೇಶ್ವರ ದೇಗುಲಕ್ಕೆ ಭೇಟಿ ನೀಡಿದ್ದರು. ಭಸ್ಮಾರತಿಯಲ್ಲಿ ಭಾಗಿಯಾಗಿ ಪೂಜೆ ಸಲ್ಲಿಸಿದ್ದರು.</p><p>ಮಹಾಕಾಳೇಶ್ವರನಿಗೆ ಪ್ರತಿದಿನ ಬೆಳಿಗ್ಗೆ 3.30ರಿಂದ 5.30ರವರೆಗೆ ಬ್ರಾಹ್ಮಿ ಮುಹೂರ್ತದಲ್ಲಿ ಭಸ್ಮಾರತಿ ಮಾಡಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>