ಚಿತ್ರದ ನಾಯಕಿಯರಾಗಿ ವೈಭವಿ, ಸಂಯುಕ್ತ ಮೆನನ್, ಶರ್ಮಿಳಾ ಮಾಡ್ರೆ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದು, ರಮೇಶ್ ರೆಡ್ಡಿ ಅವರು ಚಿತ್ರಕ್ಕೆ ಬಂಡವಾಳ ಹೂಡಿಕೆ ಮಾಡಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕ ಇನ್ನಷ್ಟೆ ಘೋಷಣೆಯಾಗಬೇಕಿದ್ದು, ಪ್ರೇಕ್ಷಕರಲ್ಲಿ ಮತ್ತಷ್ಟು ನಿರೀಕ್ಷೆ ಮೂಡಿಸಿದೆ.