ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾಮ್ರಾಟ್‌ ಪೃಥ್ವಿರಾಜ್‌’ ಸಿನಿಮಾಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ

Last Updated 2 ಜೂನ್ 2022, 9:40 IST
ಅಕ್ಷರ ಗಾತ್ರ

ಲಖನೌ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ನಟನೆಯ ‘ಸಾಮ್ರಾಟ್‌ ಪೃಥ್ವಿರಾಜ್‌’ ಸಿನಿಮಾಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಿರುವುದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗುರುವಾರ ಘೋಷಿಸಿದ್ದಾರೆ.

ಲಖನೌನಲ್ಲಿ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ಚಿತ್ರ ವೀಕ್ಷಿಸಿದ ನಂತರ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಯೋಗಿ ಆದಿತ್ಯನಾಥ್‌, ‘ಇದು ನಮ್ಮ ಇತಿಹಾಸದ ಕುರಿತ ಉತ್ತಮ ಚಿತ್ರ. ಕುಟುಂಬಸ್ಥರೆಲ್ಲರೂ ಒಟ್ಟಿಗೆ ಕುಳಿತು ನೋಡಬಹುದಾದ ಸಿನಿಮಾ’ ಎಂದು ಹೇಳಿದರು.

‘ಸಾಮ್ರಾಟ್‌ ಪೃಥ್ವಿರಾಜ್‌’ ಚಿತ್ರವು ಶುಕ್ರವಾರ ದೇಶದಾದ್ಯಂತ ಬಿಡುಗಡೆಯಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT