ನಟಸಾರ್ವಭೌಮ ಚಿತ್ರದ ಬಳಿಕ ಪುನೀತ್ನಟನೆಯ ‘ಯುವರತ್ನ’ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಸಂತೋಷ್ ಆನಂದರಾಮ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.ಎರಡು ವರ್ಷದ ಹಿಂದೆ ಸಂತೋಷ್ ಆನಂದರಾಮ್ ಮತ್ತು ಪುನೀತ್ ಕಾಂಬಿನೇಷನ್ನಡಿ ತೆರೆಕಂಡಿದ್ದ ‘ರಾಜಕುಮಾರ’ ಚಿತ್ರ ಸೂಪರ್ ಹಿಟ್ ಆಗಿತ್ತು. ಹಾಗಾಗಿಯೇ, ‘ಯುವರತ್ನ’ನ ಮೇಲೂ ನಿರೀಕ್ಷೆ ದುಪ್ಪಟ್ಟಾಗಿದೆ.