ಫೆಬ್ರುವರಿ 7ರಂದು ಪುನೀತ್ ನಟನೆಯ ‘ನಟಸಾರ್ವಭೌಮ’ ತೆರೆಕಾಣಲಿದೆ. ‘ಯುವರತ್ನ’ ಪಕ್ಕಾ ಆ್ಯಕ್ಷನ್ ಸಿನಿಮಾ. ಸಾಹಸ ದೃಶ್ಯಗಳಿಂದಲೇ ಚಿತ್ರದ ಶೂಟಿಂಗ್ ಆರಂಭಿಸಲು ತೀರ್ಮಾನಿಸಲಾಗಿದೆ. ಚಿತ್ರದಲ್ಲಿ ಪುನೀತ್ ಅವರದ್ದು ಕಾಲೇಜು ವಿದ್ಯಾರ್ಥಿಯ ಪಾತ್ರವಂತೆ. ಮತ್ತೆ ‘ಅಪ್ಪು’, ‘ಅಭಿ’ ಸಿನಿಮಾದ ಸೊಗಡನ್ನು ನೆನಪಿಸಲು ನಿರ್ದೇಶಕರು ಮುಂದಾಗಿದ್ದಾರೆ. ನಾಯಕಿಯಾಗಿ ಕೀರ್ತಿ ಸುರೇಶ್ ಅಥವಾ ತಮನ್ನಾ ಭಾಟಿಯಾ ನಟಿಸಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.