<p>ಹೀರಾಲಾಲ್ ಮೂವೀಸ್ ಲಾಂಛನದಲ್ಲಿ ಚಂದ್ರಕಲಾ ಟಿ.ಆರ್. ಹಾಗೂ ಮಂಜುನಾಥ್ ನಾಯಕ್ ‘ಬೆಟ್ಟದ ದಾರಿ’ ಚಿತ್ರ ನಿರ್ಮಿಸುತ್ತಿದ್ದಾರೆ.</p>.<p>ಇತ್ತೀಚೆಗೆ ಆಲಮಟ್ಟಿ, ದೇವರ ಹಿಪ್ಪರಗಿ, ಹಿತ್ನಾಳ್, ಇಂಗಳೇಶ್ವರ, ಸುತ್ತಮುತ್ತ ‘ಬೆಳ್ಳಕ್ಕಿ ಸಾಲಂತೆ ಹಾರಾಡೋ ಆಸೆ ಈಗ, ಬದುಕೇ ಕಸಿದ ಪಾಪಿ ನೀನ್ಯಾರೋ’ ಎಂಬ ಹಾಡು ಸೇರಿದಂತೆ ಒಟ್ಟು 4 ಹಾಡುಗಳ ಚಿತ್ರೀಕರಣ ನಡೆಯಿತು. ಇದರೊಂದಿಗೆ ಚಿತ್ರದ ಸಂಪೂರ್ಣ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.</p>.<p>ಮಾ. ಚಂದ್ರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಂದಕುಮಾರ್ ಅವರ ಛಾಯಾಗ್ರಹಣ ಇರುವ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ಸಂಯೋಜಿಸಿದ್ದಾರೆ. ಅರ್ಜುನ್ (ಕಿಟ್ಟಿ) ಅವರ ಸಂಕಲನವಿದೆ. ವಿ. ನಾಗೇಂದ್ರಪ್ರಸಾದ್, ಕೆ. ಕಲ್ಯಾಣ್ ಹಾಗೂ ವಿಜಯ್ ಭರಮಸಾಗರ ಅವರ ಸಾಹಿತ್ಯವಿದೆ.</p>.<p>ಮಾಸ್ಟರ್ ನಿಶಾಂತ್ ಟಿ. ರಾಥೋಡ್, ಮಾಸ್ಟರ್ ರಂಗನಾಥ್ ಯಾದವ್, ಮಾಸ್ಟರ್ ರೋಹಿತ್, ಮಾಸ್ಟರ್ ವಿಘ್ನೇಶ್, ಬೇಬಿ ಮಾನ್ಯತಾ ಎಂ. ನಾಯಕ್, ಮನ್ದೀಪ್ ರಾಯ್, ರಮೇಶ್ ಭಟ್, ಉಮೇಶ್, ಮೈಸೂರ್ ಮಲ್ಲೇಶ್, ಆರ್. ನಾಗೇಶ್, ರಿಕ್ಕಿ, ಅಂಜಲಿ, ಮಂಜುಳಾ ರೆಡ್ಡಿ ತಾರಾಗಣದಲ್ಲಿದ್ದಾರೆ.</p>.<p>ಇದು ಹಳ್ಳಿ ಮಕ್ಕಳ ಸಾಹಸದ ಕಥನ ಹೊಂದಿರುವ ಚಿತ್ರ. ಶಿವಗಂಗೆ, ಚನ್ನಪಟ್ಟಣ, ವಿಜಯಪುರ ಹಾಗೂ ಹುತ್ತನಾಳ್ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೀರಾಲಾಲ್ ಮೂವೀಸ್ ಲಾಂಛನದಲ್ಲಿ ಚಂದ್ರಕಲಾ ಟಿ.ಆರ್. ಹಾಗೂ ಮಂಜುನಾಥ್ ನಾಯಕ್ ‘ಬೆಟ್ಟದ ದಾರಿ’ ಚಿತ್ರ ನಿರ್ಮಿಸುತ್ತಿದ್ದಾರೆ.</p>.<p>ಇತ್ತೀಚೆಗೆ ಆಲಮಟ್ಟಿ, ದೇವರ ಹಿಪ್ಪರಗಿ, ಹಿತ್ನಾಳ್, ಇಂಗಳೇಶ್ವರ, ಸುತ್ತಮುತ್ತ ‘ಬೆಳ್ಳಕ್ಕಿ ಸಾಲಂತೆ ಹಾರಾಡೋ ಆಸೆ ಈಗ, ಬದುಕೇ ಕಸಿದ ಪಾಪಿ ನೀನ್ಯಾರೋ’ ಎಂಬ ಹಾಡು ಸೇರಿದಂತೆ ಒಟ್ಟು 4 ಹಾಡುಗಳ ಚಿತ್ರೀಕರಣ ನಡೆಯಿತು. ಇದರೊಂದಿಗೆ ಚಿತ್ರದ ಸಂಪೂರ್ಣ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.</p>.<p>ಮಾ. ಚಂದ್ರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಂದಕುಮಾರ್ ಅವರ ಛಾಯಾಗ್ರಹಣ ಇರುವ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ಸಂಯೋಜಿಸಿದ್ದಾರೆ. ಅರ್ಜುನ್ (ಕಿಟ್ಟಿ) ಅವರ ಸಂಕಲನವಿದೆ. ವಿ. ನಾಗೇಂದ್ರಪ್ರಸಾದ್, ಕೆ. ಕಲ್ಯಾಣ್ ಹಾಗೂ ವಿಜಯ್ ಭರಮಸಾಗರ ಅವರ ಸಾಹಿತ್ಯವಿದೆ.</p>.<p>ಮಾಸ್ಟರ್ ನಿಶಾಂತ್ ಟಿ. ರಾಥೋಡ್, ಮಾಸ್ಟರ್ ರಂಗನಾಥ್ ಯಾದವ್, ಮಾಸ್ಟರ್ ರೋಹಿತ್, ಮಾಸ್ಟರ್ ವಿಘ್ನೇಶ್, ಬೇಬಿ ಮಾನ್ಯತಾ ಎಂ. ನಾಯಕ್, ಮನ್ದೀಪ್ ರಾಯ್, ರಮೇಶ್ ಭಟ್, ಉಮೇಶ್, ಮೈಸೂರ್ ಮಲ್ಲೇಶ್, ಆರ್. ನಾಗೇಶ್, ರಿಕ್ಕಿ, ಅಂಜಲಿ, ಮಂಜುಳಾ ರೆಡ್ಡಿ ತಾರಾಗಣದಲ್ಲಿದ್ದಾರೆ.</p>.<p>ಇದು ಹಳ್ಳಿ ಮಕ್ಕಳ ಸಾಹಸದ ಕಥನ ಹೊಂದಿರುವ ಚಿತ್ರ. ಶಿವಗಂಗೆ, ಚನ್ನಪಟ್ಟಣ, ವಿಜಯಪುರ ಹಾಗೂ ಹುತ್ತನಾಳ್ ಸುತ್ತಮುತ್ತ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>