<p><strong>ಬೆಂಗಳೂರು: </strong>ಕನ್ನಡ ಚಿತ್ರರಂಗದ ನಿರ್ದೇಶಕ ಪಿ.ಎನ್.ಸತ್ಯ ಶನಿವಾರ ಸಂಜೆ ನಿಧನರಾದರು. ರೌಡಿಸಂ ಕಥೆಯನ್ನು ಒಳಗೊಂಡ ಚಿತ್ರಗಳ ನಿರ್ದೇಶನದ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.</p>.<p>ಕೆಲ ತಿಂಗಳಿಂದ ಸತ್ಯ ಅನಾರೋಗ್ಯದಿಂದ ಬಳಲುತ್ತಿದ್ದರು.</p>.<p>ದರ್ಶನ್ ನಾಯಕನಾಗಿ ಅಭಿನಯಿಸಿದ ‘ಮೆಜೆಸ್ಟಿಕ್’ ಚಿತ್ರದ ಮೂಲಕ ನಿರ್ದೇಶಕನಾಗಿ ಸತ್ಯ ಸ್ಯಾಂಡಲ್ವುಡ್ನಲ್ಲಿ ಹೆಸರು ಮಾಡಿದರು. ಸುದೀಪ್ ಅಭಿನಯದ ‘ಗೂಳಿ’, ದುನಿಯಾ ವಿಜಯ್ ಅಭಿನಯದ ‘ಶಿವಾಜಿನಗರ’ ಸೇರಿ ಅನೇಕ ಸಿನಿಮಾಗಳನ್ನು ಸತ್ಯ ನಿರ್ದೇಶಿಸಿದ್ದಾರೆ.</p>.<p>‘ಪಾಗಲ್’ ಚಿತ್ರದಲ್ಲಿ ನಾಯಕನಾಗಿಯೂ ಅವರು ಕಾಣಿಸಿಕೊಂಡಿದ್ದರು. ಹತ್ತಾರು ಸಿನಿಮಾಗಳಲ್ಲಿ ಖಳನಟನ ಪಾತ್ರದಲ್ಲಿಯೂ ಅಭಿನಯಿಸಿದ್ದರು. ‘ಮರಿ ಟೈಗರ್’ ಸತ್ಯ ನಿರ್ದೇಶನದ ಕೊನೆಯ ಸಿನಿಮಾ.</p>.<p><strong>ನಿರ್ದೇಶನದ ಕೆಲವು ಸಿನಿಮಾಗಳು:</strong><br /> * ಡಾನ್<br /> * ದಾಸಾ<br /> * ಶಾಸ್ತ್ರಿ<br /> * ತಂಗಿಗಾಗಿ<br /> * ಹ್ಯಾಟ್ರಿಕ್ ಹೊಡಿ ಮಗ<br /> * ಬೆಂಗಳೂರು ಅಂಡರ್ವರ್ಡ್</p>.<p>ಸತ್ಯ ಅವರ ನಿಧನಕ್ಕೆ ಚಿತ್ರರಂಗದ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕನ್ನಡ ಚಿತ್ರರಂಗದ ನಿರ್ದೇಶಕ ಪಿ.ಎನ್.ಸತ್ಯ ಶನಿವಾರ ಸಂಜೆ ನಿಧನರಾದರು. ರೌಡಿಸಂ ಕಥೆಯನ್ನು ಒಳಗೊಂಡ ಚಿತ್ರಗಳ ನಿರ್ದೇಶನದ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.</p>.<p>ಕೆಲ ತಿಂಗಳಿಂದ ಸತ್ಯ ಅನಾರೋಗ್ಯದಿಂದ ಬಳಲುತ್ತಿದ್ದರು.</p>.<p>ದರ್ಶನ್ ನಾಯಕನಾಗಿ ಅಭಿನಯಿಸಿದ ‘ಮೆಜೆಸ್ಟಿಕ್’ ಚಿತ್ರದ ಮೂಲಕ ನಿರ್ದೇಶಕನಾಗಿ ಸತ್ಯ ಸ್ಯಾಂಡಲ್ವುಡ್ನಲ್ಲಿ ಹೆಸರು ಮಾಡಿದರು. ಸುದೀಪ್ ಅಭಿನಯದ ‘ಗೂಳಿ’, ದುನಿಯಾ ವಿಜಯ್ ಅಭಿನಯದ ‘ಶಿವಾಜಿನಗರ’ ಸೇರಿ ಅನೇಕ ಸಿನಿಮಾಗಳನ್ನು ಸತ್ಯ ನಿರ್ದೇಶಿಸಿದ್ದಾರೆ.</p>.<p>‘ಪಾಗಲ್’ ಚಿತ್ರದಲ್ಲಿ ನಾಯಕನಾಗಿಯೂ ಅವರು ಕಾಣಿಸಿಕೊಂಡಿದ್ದರು. ಹತ್ತಾರು ಸಿನಿಮಾಗಳಲ್ಲಿ ಖಳನಟನ ಪಾತ್ರದಲ್ಲಿಯೂ ಅಭಿನಯಿಸಿದ್ದರು. ‘ಮರಿ ಟೈಗರ್’ ಸತ್ಯ ನಿರ್ದೇಶನದ ಕೊನೆಯ ಸಿನಿಮಾ.</p>.<p><strong>ನಿರ್ದೇಶನದ ಕೆಲವು ಸಿನಿಮಾಗಳು:</strong><br /> * ಡಾನ್<br /> * ದಾಸಾ<br /> * ಶಾಸ್ತ್ರಿ<br /> * ತಂಗಿಗಾಗಿ<br /> * ಹ್ಯಾಟ್ರಿಕ್ ಹೊಡಿ ಮಗ<br /> * ಬೆಂಗಳೂರು ಅಂಡರ್ವರ್ಡ್</p>.<p>ಸತ್ಯ ಅವರ ನಿಧನಕ್ಕೆ ಚಿತ್ರರಂಗದ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>