ಈ ಚಿತ್ರದಲ್ಲಿ ನಾಯಕನು ಕಳ್ಳರ ಗುಂಪನ್ನು ಸೇರಿಕೊಳ್ಳುತ್ತಾನೆ. ಆತ ಏಕೆ ಅದನ್ನು ಸೇರಿಕೊಳ್ಳುತ್ತಾನೆ, ನಾಯಕಿಗೂ ವಜ್ರಕ್ಕೂ ಏನು ಸಂಬಂಧ ಎಂಬುದನ್ನು ಚಿತ್ರ ನೋಡಿ ತಿಳಿದುಕೊಳ್ಳಬೇಕು. ಗುಬ್ಬಿ, ಬೆಂಗಳೂರು ಮತ್ತು ಉಡುಪಿಯಲ್ಲಿ ಇದರ ಚಿತ್ರೀಕರಣ ನಡೆದಿದೆ ಎಂದು ತಂಡ ಹೇಳಿಕೊಂಡಿದೆ. ಪವನ್ ಪಾರ್ಥ ಅವರು ಚಿತ್ರದ ಹಾಡುಗಳಿಗೆ ಸಂಗೀತ ನೀಡಿದ್ದಾರೆ.