<p><strong>ನವದೆಹಲಿ:</strong> ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಪಾಕಿಸ್ತಾನ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಭಾರತ, ಸಿಂಧೂ ಜಲ ನದಿ ಒಪ್ಪಂದ ಸೇರಿದಂತೆ ರಾಜತಾಂತ್ರಿಕ ಬಾಂಧವ್ಯವನ್ನು ಕಡಿದುಕೊಂಡಿತ್ತು. </p><p>ಭಾರತ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಪಾಕಿಸ್ತಾನ ಮೂಲದ ಸಾಮಾಜಿಕ ಮಾಧ್ಯಮಗಳ ಖಾತೆಗಳ ಮೇಲೂ ನಿರ್ಬಂಧ ವಿಧಿಸಲಾಗಿತ್ತು. </p><p>ಇದರ ಮುಂದುವರಿದ ಭಾಗವೆಂಬಂತೆ, ಪಾಕಿಸ್ತಾನ ಮೂಲದ ವೆಬ್-ಸರಣಿ, ಚಲನಚಿತ್ರ, ಪಾಡ್ಕಾಸ್ಟ್ ಸೇರಿದಂತೆ ಎಲ್ಲ ರೀತಿಯ ಕಂಟೆಂಟ್ಗಳನ್ನು ತಕ್ಷಣವೇ ನಿಲ್ಲಿಸುವಂತೆ ಒಟಿಟಿ ವೇದಿಕೆಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. </p><p>ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ತಿಳಿಸಿದೆ. </p><p>ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಒಟಿಟಿ ವೇದಿಕೆಗಳು, ಮಾಧ್ಯಮ ಸ್ಟ್ರೀಮಿಂಗ್ ವೇದಿಕೆಗಳು, ಮಧ್ಯವರ್ತಿಗಳ ವೆಬ್-ಸಿರೀಸ್, ಚಲನಚಿತ್ರ, ಹಾಡುಗಳು, ಪಾಡ್ಕಾಸ್ಟ್ಗಳು ಮತ್ತು ಇತರೆ ಸ್ಟ್ರೀಮಿಂಗ್ ಮಾಧ್ಯಮಗಳು ಪಾಕ್ ಮೂಲದ ವಿಷಯಗಳ ಪ್ರಸಾರವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ. </p><p>ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರವನ್ನು ಗುರಿಯಾಗಿಸಿ ಭಾರತೀಯ ಸಶಸ್ತ್ರ ಪಡೆಗಳು, ಮಂಗಳವಾರ ಮಧ್ಯರಾತ್ರಿ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು. ಈ ದಾಳಿಯಲ್ಲಿ ಉಗ್ರರ ಒಂಬತ್ತು ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. </p>.IPL 2025 | ಈಗಲೇ ನಿವೃತ್ತಿ ಕುರಿತು ನಿರ್ಧರಿಸುವುದಿಲ್ಲ: ಧೋನಿ.IPL 2025 | ಕೋಲ್ಕತ್ತದ ಬಳಿಕ ಜೈಪುರ ಮೈದಾನಕ್ಕೂ ಬಾಂಬ್ ಬೆದರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಪಾಕಿಸ್ತಾನ ಮೇಲೆ ಕಠಿಣ ಕ್ರಮ ಕೈಗೊಂಡಿರುವ ಭಾರತ, ಸಿಂಧೂ ಜಲ ನದಿ ಒಪ್ಪಂದ ಸೇರಿದಂತೆ ರಾಜತಾಂತ್ರಿಕ ಬಾಂಧವ್ಯವನ್ನು ಕಡಿದುಕೊಂಡಿತ್ತು. </p><p>ಭಾರತ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಪಾಕಿಸ್ತಾನ ಮೂಲದ ಸಾಮಾಜಿಕ ಮಾಧ್ಯಮಗಳ ಖಾತೆಗಳ ಮೇಲೂ ನಿರ್ಬಂಧ ವಿಧಿಸಲಾಗಿತ್ತು. </p><p>ಇದರ ಮುಂದುವರಿದ ಭಾಗವೆಂಬಂತೆ, ಪಾಕಿಸ್ತಾನ ಮೂಲದ ವೆಬ್-ಸರಣಿ, ಚಲನಚಿತ್ರ, ಪಾಡ್ಕಾಸ್ಟ್ ಸೇರಿದಂತೆ ಎಲ್ಲ ರೀತಿಯ ಕಂಟೆಂಟ್ಗಳನ್ನು ತಕ್ಷಣವೇ ನಿಲ್ಲಿಸುವಂತೆ ಒಟಿಟಿ ವೇದಿಕೆಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. </p><p>ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ತಿಳಿಸಿದೆ. </p><p>ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಒಟಿಟಿ ವೇದಿಕೆಗಳು, ಮಾಧ್ಯಮ ಸ್ಟ್ರೀಮಿಂಗ್ ವೇದಿಕೆಗಳು, ಮಧ್ಯವರ್ತಿಗಳ ವೆಬ್-ಸಿರೀಸ್, ಚಲನಚಿತ್ರ, ಹಾಡುಗಳು, ಪಾಡ್ಕಾಸ್ಟ್ಗಳು ಮತ್ತು ಇತರೆ ಸ್ಟ್ರೀಮಿಂಗ್ ಮಾಧ್ಯಮಗಳು ಪಾಕ್ ಮೂಲದ ವಿಷಯಗಳ ಪ್ರಸಾರವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಲ್ಲಿಸುವಂತೆ ನಿರ್ದೇಶನ ನೀಡಲಾಗಿದೆ. </p><p>ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರವನ್ನು ಗುರಿಯಾಗಿಸಿ ಭಾರತೀಯ ಸಶಸ್ತ್ರ ಪಡೆಗಳು, ಮಂಗಳವಾರ ಮಧ್ಯರಾತ್ರಿ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು. ಈ ದಾಳಿಯಲ್ಲಿ ಉಗ್ರರ ಒಂಬತ್ತು ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. </p>.IPL 2025 | ಈಗಲೇ ನಿವೃತ್ತಿ ಕುರಿತು ನಿರ್ಧರಿಸುವುದಿಲ್ಲ: ಧೋನಿ.IPL 2025 | ಕೋಲ್ಕತ್ತದ ಬಳಿಕ ಜೈಪುರ ಮೈದಾನಕ್ಕೂ ಬಾಂಬ್ ಬೆದರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>