ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನಗಾದ ಅನ್ಯಾಯದ ಬಗ್ಗೆ ರಾಜ್ಯಪಾಲರಿಗೆ ತಿಳಿಸಿದ್ದೇನೆ: ನಟಿ ಕಂಗನಾ ರನೌತ್‌

Last Updated 13 ಸೆಪ್ಟೆಂಬರ್ 2020, 12:46 IST
ಅಕ್ಷರ ಗಾತ್ರ

ಮುಂಬೈ: ನಟಿ ಕಂಗನಾ ರನೌತ್ ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಮುಂಬೈನಲ್ಲಿರುವ ರಾಜಭವನದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಕಂಗನಾ, 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ.

ಶಿವಸೇನಾ ನಾಯಕರನ್ನು ಏಕವಚನದಲ್ಲಿ ಟೀಕಿಸಿದ್ದ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ಕಂಗನಾ ಕಚೇರಿಯ ಕೆಲಭಾಗಗಳನ್ನು ಮಹಾನಗರ ಪಾಲಿಕೆಯು ನೆಲಸಮಗೊಳಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಆ ನಂತರ ಕಂಗನಾ ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು ಮತ್ತು ಮುಂಬೈಯನ್ನು ಪಾಕಿಸ್ತಾನಕ್ಕೆ ಹೋಲಿಸಿ ಟ್ವೀಟ್‌ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT