ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜಕ್ಕೆ ಉಪಕಾರಿಯಾಗಿ ಬಾಳುತ್ತೇನೆ ಎಂದ ಆರ್ಯನ್ ಖಾನ್!

Last Updated 17 ಅಕ್ಟೋಬರ್ 2021, 12:39 IST
ಅಕ್ಷರ ಗಾತ್ರ

ಬೆಂಗಳೂರು: ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಅಕ್ಟೋಬರ್ 2ರಂದು ಬಂಧನಕ್ಕೊಳಗಾಗಿರುವ ಆರ್ಯನ್ ಖಾನ್ ಅವರಿಗೆ ಎನ್‌ಸಿಬಿ ಆಪ್ತ ಸಮಾಲೋಚನೆ ನಡೆಸಿದೆ.

ಶಾರುಖ್ ಪುತ್ರ ಆರ್ಯನ್ ಖಾನ್ ಬಂಧನವಾದ ಬಳಿಕ ಜಾಮೀನು ಅರ್ಜಿ ಸಲ್ಲಿಸಲಾಗಿದೆಯಾದರೂ, ಅ. 20ರವರೆಗೆ ನ್ಯಾಯಾಂಗ ಬಂಧನದಲ್ಲಿರಬೇಕಿದೆ. ಅರ್ಜಿ ವಿಚಾರಣೆ ನಡೆದ ಬಳಿಕ ತೀರ್ಪು ಬರಲಿದೆ.

ಈ ಸಂದರ್ಭದಲ್ಲಿ ಎನ್‌ಸಿಬಿ ಕಚೇರಿಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಆಪ್ತ ಸಮಾಲೋಚಕರು ವಿಶೇಷ ಕೌನ್ಸೆಲಿಂಗ್ ನಡೆಸಿದ್ದಾರೆ.

ಅದರಂತೆ ಕೌನ್ಸೆಲಿಂಗ್‌ಗೆ ಒಳಗಾದ ಬಳಿಕ ಆರ್ಯನ್ ಖಾನ್, ಮುಂದೆ ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕನಾಗಿ ಬಾಳುತ್ತೇನೆ, ಬಡವರ ಉದ್ಧಾರಕ್ಕೆ ಶ್ರಮಿಸುತ್ತೇನೆ, ಮುಂದೆ ಎನ್‌ಸಿಬಿ ಅಧಿಕಾರಿಗಳು ಕೂಡ ಮೆಚ್ಚುವ ಕಾರ್ಯ ಮಾಡುತ್ತೇನೆ ಎಂದು ತಿಳಿಸಿದ್ದಾರೆಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT