ಏ.3ರಂದು ಸಮಾವೇಶ: ‘ಕನಕರ ಕರ್ಮಭೂಮಿ ಕಾಗಿನೆಲೆಯಲ್ಲಿ ಏಪ್ರಿಲ್ 3ರಂದು ಹಿಂದುಳಿದ ವರ್ಗದವರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಪಕ್ಷದ ಎಲ್ಲ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ. ಲಕ್ಷಾಂತರ ಜನರು ಭಾಗವಹಿಸಲಿದ್ದು, ಇದನ್ನು ನೋಡಿ ಸಿದ್ದರಾಮಯ್ಯ ಅವರ ಎದೆ ಒಡೆದುಹೋಗಲಿದೆ’ ಎಂದು ಚುಚ್ಚಿದರು.