ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನಾವು ಇಟಲಿಗೆ ತೆರಳಿದ್ದೆವು ಎಂಬುದಕ್ಕೆ ಸಾಕ್ಷಿ ಇಲ್ಲ. ಆದರೂ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ನೆದರ್ಲೆಂಡ್ ಹೋಗಿದ್ದ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಅಲ್ಲಿ ಕೊರೊನಾ ಸೋಂಕಿನ ಭೀತಿ ಇರಲಿಲ್ಲ. ಆದರೂ ಆರೋಗ್ಯ ದೃಷ್ಟಿಯಿಂದ ಮಧುಚಂದ್ರವನ್ನು ಅರ್ಧಕ್ಕೆ ನಿಲ್ಲಿಸಿ ವಾಪಸ್ ಮರಳಿದೆವು’ ಎಂದು ಹೇಳಿದರು.