<p><strong>ಮುಂಬೈ:</strong>2019ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಕರ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಸ್ಥಳೀಯ ನ್ಯಾಯಾಲಯವು ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.</p>.<p>ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್.ಆರ್. ಖಾನ್ ಮಂಗಳವಾರ ನೀಡಿರುವ ತಮ್ಮ ಆದೇಶದಲ್ಲಿ, ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಗಮನಿಸಿ ಇಬ್ಬರಿಗೂ ಸಮನ್ಸ್ ಹೊರಡಿಸಿದ್ದು, ಮುಂದಿನ ವಿಚಾರಣೆಯನ್ನು ಏ. 5ಕ್ಕೆ ಮುಂದೂಡಿದ್ದಾರೆ.</p>.<p>ಪತ್ರಕರ್ತ ಅಶೋಕ್ ಪಾಂಡೆ ಎಂಬುವವರು, ತಮ್ಮ ದೂರಿನಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ಶೇಖ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದ್ದರು.</p>.<p>ಮುಂಬೈ ಬೀದಿಯಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ಸಲ್ಮಾನ್ ಖಾನ್ ಅವರ ಫೋಟೊಗಳನ್ನು ಕೆಲವು ಮಾಧ್ಯಮದವರು ಕ್ಲಿಕ್ ಮಾಡಲು ಪ್ರಾರಂಭಿಸಿದಾಗ, ತಮ್ಮ (ಪತ್ರಕರ್ತ) ಮೊಬೈಲ್ ಫೋನ್ ಅನ್ನು ಸಲ್ಮಾನ್ ಕಿತ್ತುಕೊಂಡರು ಎಂದು ಪಾಂಡೆ ಆರೋಪಿಸಿದ್ದಾರೆ. ಈ ವೇಳೆ, ನನ್ನೊಂದಿಗೆ ವಾಗ್ವಾದಕ್ಕಿಳಿದ ಸಲ್ಮಾನ್ ಖಾನ್ ಅವರು, ನನಗೆ ಬೆದರಿಕೆಯೊಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಇದಕ್ಕೂ ಮುನ್ನ, ಈ ಸಂಬಂಧ ತನಿಖೆ ಕೈಗೊಂಡು ವರದಿ ಸಲ್ಲಿಸುವಂತೆ ಸ್ಥಳೀಯ ಪೊಲೀಸ್ ಠಾಣೆಗೆ ನ್ಯಾಯಾಲಯ ಆದೇಶಿಸಿತ್ತು.</p>.<p>ಮಂಗಳವಾರದ ತನ್ನ ಆದೇಶದಲ್ಲಿ, 'ಪೊಲೀಸ್ ವರದಿ ಮತ್ತು ಸಲ್ಲಿಕೆಯಾಗಿರುವ ಇತರ ದಾಖಲೆಗಳನ್ನು ಗಮನಿಸಿದರೆ ಆರೋಪಿಗಳ ವಿರುದ್ಧವಾಗಿ ಸಾಕಷ್ಟು ಆಧಾರಗಳಿವೆ' ಎಂದು ನ್ಯಾಯಾಲಯ ಹೇಳಿದೆ.</p>.<p>ದೂರಿನಲ್ಲಿ ಮಾಡಿರುವ ಆರೋಪಗಳಲ್ಲಿ ಯಾವುದಾದರೂ ಅಂಶ ನಿಜವೆಂದು ಪತ್ತೆಯಾದರೆ ಆಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಗಳಿಗೆ ಸಮನ್ಸ್ ನೀಡುತ್ತದೆ. ಬಳಿಕ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>2019ರ ವಿವಾದಕ್ಕೆ ಸಂಬಂಧಿಸಿದಂತೆ ಪತ್ರಕರ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಸ್ಥಳೀಯ ನ್ಯಾಯಾಲಯವು ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ನವಾಜ್ ಶೇಖ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.</p>.<p>ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಆರ್.ಆರ್. ಖಾನ್ ಮಂಗಳವಾರ ನೀಡಿರುವ ತಮ್ಮ ಆದೇಶದಲ್ಲಿ, ಆರೋಪಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಗಮನಿಸಿ ಇಬ್ಬರಿಗೂ ಸಮನ್ಸ್ ಹೊರಡಿಸಿದ್ದು, ಮುಂದಿನ ವಿಚಾರಣೆಯನ್ನು ಏ. 5ಕ್ಕೆ ಮುಂದೂಡಿದ್ದಾರೆ.</p>.<p>ಪತ್ರಕರ್ತ ಅಶೋಕ್ ಪಾಂಡೆ ಎಂಬುವವರು, ತಮ್ಮ ದೂರಿನಲ್ಲಿ ನಟ ಸಲ್ಮಾನ್ ಖಾನ್ ಮತ್ತು ಅವರ ಅಂಗರಕ್ಷಕ ಶೇಖ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿದ್ದರು.</p>.<p>ಮುಂಬೈ ಬೀದಿಯಲ್ಲಿ ಸೈಕ್ಲಿಂಗ್ ಮಾಡುತ್ತಿದ್ದ ಸಲ್ಮಾನ್ ಖಾನ್ ಅವರ ಫೋಟೊಗಳನ್ನು ಕೆಲವು ಮಾಧ್ಯಮದವರು ಕ್ಲಿಕ್ ಮಾಡಲು ಪ್ರಾರಂಭಿಸಿದಾಗ, ತಮ್ಮ (ಪತ್ರಕರ್ತ) ಮೊಬೈಲ್ ಫೋನ್ ಅನ್ನು ಸಲ್ಮಾನ್ ಕಿತ್ತುಕೊಂಡರು ಎಂದು ಪಾಂಡೆ ಆರೋಪಿಸಿದ್ದಾರೆ. ಈ ವೇಳೆ, ನನ್ನೊಂದಿಗೆ ವಾಗ್ವಾದಕ್ಕಿಳಿದ ಸಲ್ಮಾನ್ ಖಾನ್ ಅವರು, ನನಗೆ ಬೆದರಿಕೆಯೊಡ್ಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.</p>.<p>ಇದಕ್ಕೂ ಮುನ್ನ, ಈ ಸಂಬಂಧ ತನಿಖೆ ಕೈಗೊಂಡು ವರದಿ ಸಲ್ಲಿಸುವಂತೆ ಸ್ಥಳೀಯ ಪೊಲೀಸ್ ಠಾಣೆಗೆ ನ್ಯಾಯಾಲಯ ಆದೇಶಿಸಿತ್ತು.</p>.<p>ಮಂಗಳವಾರದ ತನ್ನ ಆದೇಶದಲ್ಲಿ, 'ಪೊಲೀಸ್ ವರದಿ ಮತ್ತು ಸಲ್ಲಿಕೆಯಾಗಿರುವ ಇತರ ದಾಖಲೆಗಳನ್ನು ಗಮನಿಸಿದರೆ ಆರೋಪಿಗಳ ವಿರುದ್ಧವಾಗಿ ಸಾಕಷ್ಟು ಆಧಾರಗಳಿವೆ' ಎಂದು ನ್ಯಾಯಾಲಯ ಹೇಳಿದೆ.</p>.<p>ದೂರಿನಲ್ಲಿ ಮಾಡಿರುವ ಆರೋಪಗಳಲ್ಲಿ ಯಾವುದಾದರೂ ಅಂಶ ನಿಜವೆಂದು ಪತ್ತೆಯಾದರೆ ಆಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಗಳಿಗೆ ಸಮನ್ಸ್ ನೀಡುತ್ತದೆ. ಬಳಿಕ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>