ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LIVE: ಪ್ರಜಾವಾಣಿ ಕನ್ನಡ ಸಿನಿ ಸಮ್ಮಾನ, 'ಕಾಂತಾರ'ಕ್ಕೆ ಅತ್ಯುತ್ತಮ‌ ಚಿತ್ರ ಪ್ರಶಸ್ತಿ

Published 3 ಜೂನ್ 2023, 12:13 IST
Last Updated 5 ಜೂನ್ 2023, 10:58 IST
ಅಕ್ಷರ ಗಾತ್ರ
12:1303 Jun 2023

ಕಾರ್ಯಕ್ರಮಕ್ಕೆ ಕ್ಷಣಗಣನೆ 

ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಿಬ್ಬಂದಿ ವೇದಿಕೆ ಪೂಜೆ ನೆರವರಿಸಿದ್ದಾರೆ.

12:1603 Jun 2023

ಸಾಂಸ್ಕೃತಿಕ ಕಾರ್ಯಕ್ರಮಗಳ ರಸದೌತಣ

ಬಹು ನಿರೀಕ್ಷಿತ  ‘ಪ್ರಜಾವಾಣಿ ಕನ್ನಡ ಸಿನಿಮಾ ಸಮ್ಮಾನ’ ಪ್ರದಾನ ಸಮಾರಂಭ ಇಂದು ಸಂಜೆ 6.30ಕ್ಕೆ ನಡೆಯಲಿದೆ.

12:1703 Jun 2023

ಗಣ್ಯರ ಸಮಾಗಮ

ಕನ್ನಡ ಚಿತ್ರರಂಗದ ಪ್ರಮುಖ ನಟ- ನಟಿಯರು, ಸಾಂಸ್ಕೃತಿಕ ಲೋಕದ ದಿಗ್ಗಜರು, ಮುಖ್ಯಮಂತ್ರಿಯವರೂ ಒಳಗೊಂಡಂತೆ ನಾಡಿನ ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

12:2103 Jun 2023

ಪ್ರತಿಭಾನ್ವಿತರಿಗೆ ಪುರಸ್ಕಾರ ಪ್ರದಾನ

ಕನ್ನಡ ಚಿತ್ರರಂಗದ ಪ್ರತಿಭಾನ್ವಿತರನ್ನು 24 ವಿಭಾಗಗಳಲ್ಲಿ ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ.

12:2603 Jun 2023

ಮತದಾನದ ಮೂಲಕ ಪುರಸ್ಕೃತರ ಆಯ್ಕೆ

15 ವಿಭಾಗಗಳ ಪುರಸ್ಕಾರಗಳಿಗೆ ಪುರಸ್ಕೃತರನ್ನು ಚಿತ್ರರಂಗದ ಹಲವು ವಿಭಾಗಗಳಲ್ಲಿನ ವೃತ್ತಿಪರರು ಮತದಾನ ಮಾಡಿ ಆಯ್ಕೆ ಮಾಡಿರುವುದು ವಿಶೇಷ. ನಾಲ್ಕು ವಿಭಾಗಗಳಲ್ಲಿ ಜನರೇ ತಮ್ಮಿಷ್ಟದ –ನಾಯಕ, ನಾಯಕಿ, ಸಿನಿಮಾ ಹಾಗೂ ಉತ್ತಮ ಸಂಗೀತ– ಆಯ್ಕೆ ಮಾಡಿದ್ದಾರೆ.

12:3103 Jun 2023

ಪ್ರಜಾವಾಣಿ@75ರ ಸಂದರ್ಭದ ಈ ಸಮ್ಮಾನ ಪತ್ರಿಕೆಯ ಮೊದಲ ಸಾಹಸ

ಪ್ರಜಾವಾಣಿ@75ರ ಸಂದರ್ಭದ ಈ ಸಮ್ಮಾನ ಪತ್ರಿಕೆಯ ಮೊದಲ ಸಾಹಸ. ಕನ್ನಡ ಚಿತ್ರರಂಗದ ಹಬ್ಬವೇ ಇದಾಗಿರುವಂತೆ ಚಿತ್ರೋದ್ಯಮ ಸಂಭ್ರಮಿಸುತ್ತಿದೆ.

12:3203 Jun 2023

ಗಣ್ಯರ ಮೆಚ್ಚುಗೆ

ಕಾಂಗ್ರೆಸ್ ನಾಯಕ ಬಿ.ಕೆ ಚಂದ್ರಶೇಖರ
ಕಾಂಗ್ರೆಸ್ ನಾಯಕ ಬಿ.ಕೆ ಚಂದ್ರಶೇಖರ

‘ವಿಶ್ವಮಟ್ಟದಲ್ಲಿ ಛಾಪು ಮೂಡಿಸುತ್ತಿರುವ ಕನ್ನಡ ಚಿತ್ರರಂಗದ ಹೊಳೆವ ನಕ್ಷತ್ರಗಳನ್ನು, ಅಡಗಿರುವ ಪ್ರತಿಭೆಗಳನ್ನು ಗುರುತಿಸುವ ಅರ್ಥಪೂರ್ಣ ಕೆಲಸ ಇದಾಗಿದೆ’ ಎಂದು ಚಿತ್ರರಂಗದ ದಿಗ್ಗಜರು ಬಣ್ಣಿಸಿದ್ದಾರೆ.

12:3303 Jun 2023

ಪುರಸ್ಕೃತರ ಆಯ್ಕೆ ಪ್ರಕ್ರಿಯೆ

ಇಪ್ಪತ್ತು ಪರಿಣತರ ತಂಡ 2022ರಲ್ಲಿ ತೆರೆಕಂಡ ಕನ್ನಡ ಸಿನಿಮಾಗಳನ್ನು ವೀಕ್ಷಿಸಿ, 23 ವಿಭಾಗಗಳಿಗೆ ನಾಮ ನಿರ್ದೇಶನಗಳನ್ನು ಮಾಡಿತ್ತು. ಆ ಪೈಕಿ, ಚಿತ್ರೋದ್ಯಮಕ್ಕೆ ಹೊಸ ದಿಕ್ಕು ಕಲ್ಪಿಸಬಲ್ಲ ನಾಲ್ಕು ವಿಭಾಗಗಳಿಗೆ ಪ್ರಮುಖ ತೀರ್ಪುಗಾರರು ಅರ್ಹರನ್ನು ಆರಿಸಿದ್ದಾರೆ.

12:3603 Jun 2023

ಪ್ರಮುಖ ತೀರ್ಪುಗಾರರು

ಗಿರೀಶ ಕಾಸರವಳ್ಳಿ, ಹಂಸಲೇಖ, ಯೋಗರಾಜ್ ಭಟ್, ಪ್ರಕಾಶ್ ರಾಜ್‌, ಶ್ರುತಿ ಹರಿಹರನ್, ವಿದ್ಯಾಶಂಕರ್ ಹಾಗೂ ಸುಮನಾ ಕಿತ್ತೂರು ಪ್ರಮುಖ ತೀರ್ಪುಗಾರರು. ಜೀವಮಾನ ಶ್ರೇಷ್ಠ ಸಾಧನೆಗಾಗಿಯೂ ಸಮ್ಮಾನ ನಡೆಯಲಿದೆ. 

12:4103 Jun 2023

ಸಾಂಸ್ಕೃತಿಕ ಕಾರ್ಯಕ್ರಮ

ಸಿನಿಮಾದ ತಾರೆಗಳೇ ಮಿಂಚುವಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮ್ಮಾನಕ್ಕೆ ಯಾರೆಲ್ಲ ಭಾಜನರಾಗಿದ್ದಾರೆ ಎಂಬ ಪ್ರಶ್ನೆಗೆ ದೊರೆಯುವ ಉತ್ತರಗಳು ಸಮಾರಂಭದ ಹೆಗ್ಗುರುತುಗಳಾಗಿವೆ.