ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಹರ್ಷ ನಾರಾಯಣ, ‘ಕುಲಪತಿ ಹುದ್ದೆ ಖಾಲಿ ಇರುವ ಕಾರಣ ಈ ವಿಶ್ವವಿದ್ಯಾಲಯಗಳಲ್ಲಿ ಪ್ರಮುಖ ಶೈಕ್ಷಣಿಕ ನಿರ್ಣಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಮಂಜೂರಾಗಿರುವ ಪ್ರಾಧ್ಯಾಪಕರ ಹುದ್ದೆಗಳ ಪೈಕಿ ಶೇ 50ರಷ್ಟು ಖಾಲಿ ಇವೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ’ ಎಂದು ದೂರಿದರು.