ಬೆಂಗಳೂರು: ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿರುವ ಸಮುಚ್ಛಯ ಭವನ ಕಟ್ಟಡದ ಮೊದಲ ಮಹಡಿಯಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.
ಕಟ್ಟಡದ ಮೊದಲ ಮಹಡಿಯಲ್ಲಿ ಸೌಂಡ್ ರೂಮಿನಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿದ್ದರಿಂದ ಅಲ್ಲಿದ್ದ ಉಪಕರಣಗಳು ಸುಟ್ಟು ಕರಕಲಾಗಿವೆ. ಸೌಂಡ್ ರೂಮಿನ ಸೀಲಿಂಗ್ ಪೂರ್ತಿ ಸುಟ್ಟು ಕರಕಲಾಗಿದೆ.
ಸೋಮವಾರ, ಮಂಗಳವಾರ ಮತ್ತು ಬುಧವಾರ ಮೂರು ದಿನಗಳ ಕಾಲ ನಿರಂತರವಾಗಿ ಸಮುಚ್ಛಯ ಭವನದಲ್ಲಿ ಯಾವುದೇ ಕಾರ್ಯಕ್ರಮಗಳು ಇರಲಿಲ್ಲ.ಅನಾಹುತದಬಗ್ಗೆ ಇನ್ನಷ್ಟೇ ತನಿಖೆ ನಡೆಯಬೇಕಿದೆ.
ಕನ್ನಡ ಮತ್ತು ಸಂಸ್ಕೃತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುಮಾರು 24 ಎಕರೆ ವಿಸ್ತೀರ್ಣದ ಕಲಾಗ್ರಾಮದಲ್ಲಿ ರಾಷ್ಟ್ರೀಯ ನಾಟಕ ಶಾಲೆ ಮತ್ತು ಕುವೆಂಪು ಭಾಷಾ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.