ನಾಟಕ ಅಕಾಡೆಮಿ ಸದಸ್ಯ ಕೆ.ಆರ್.ಪ್ರಕಾಶ ನಿಧನ

ಶಿರಸಿ: ರಾಜ್ಯ ನಾಟಕ ಅಕಾಡೆಮಿ ಸದಸ್ಯ ಶಿರಸಿಯ ಕಾನಕೊಡ್ಲು ಮೂಲದ ಕೆ.ಆರ್.ಪ್ರಕಾಶ (50) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ ಪತ್ನಿ, ಪುತ್ರ ಇದ್ದಾರೆ.
ನೂರಕ್ಕೂ ಹೆಚ್ಚು ನಾಟಕಗಳಿಗೆ ಅವರು ನಿರ್ದೇಶನ ಮಾಡಿದ್ದರು. ನದಿ, ಬೆಟ್ಟದಲ್ಲಿ ನಾಟಕ ಪ್ರದರ್ಶನ ಆಯೋಜನೆ ಮಾಡುವ ಮೂಲಕ ಹೊಸತನ ಸೃಷ್ಟಿಸಿದ ರಂಗಕರ್ಮಿ ಎಂಬ ಖ್ಯಾತಿಗೆ ಪಾತ್ರವಾಗಿದ್ದರು. ಕೆಲ ವರ್ಷ ಶಿರಸಿಯಲ್ಲಿ ಪತ್ರಕರ್ತರಾಗಿಯೂ ಕೆಲಸ ಮಾಡಿದ್ದರು.
ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.