ಬೆಂಗಳೂರು: ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ದೇಶದ ಜನರು ರಾಜಕೀಯ ಬದಲಾವಣೆ ಬಯಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಈ ಬೆಳವಣಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವೈಯಕ್ತಿಕ ಹಿನ್ನಡೆಯೂ ಹೌದು. 2019ರ ಲೋಕಸಭಾ ಚುನಾವಣಾ ಫಲಿತಾಂಶದ ಮುನ್ಸೂಚನೆಯೂ ಹೌದು’ ಎಂದು ಹೇಳಿದ್ದಾರೆ.
ಲೋಕಸಭೆ ಮತ್ತು ವಿಧಾನಸಭಾ ಉಪ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲು ದೇಶದ ಜನತೆ ರಾಜಕೀಯ ಬದಲಾವಣೆ ಬಯಸುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿ. ಇದು ಮೋದಿ ಅವರಿಗಾಗಿರುವ ವೈಯಕ್ತಿಕ ಹಿನ್ನಡೆಯು ಹೌದು, 2019 ರ ಲೋಕಸಭಾ ಚುನಾವಣಾ ಫಲಿತಾಂಶದ ಮುನ್ಸೂಚನೆಯೂ ಹೌದು.@INCKarnataka