ಬೆಂಗಳೂರು: ‘ಜೀ’ ಕನ್ನಡ ವಾಹಿನಿಯಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9ರಿಂದ 10ರ ವರಗೆ ಪ್ರಸಾರವಾಗುವ 'ಕಾಮಿಡಿ ಕಿಲಾಡಿಗಳು' ಸೀಸನ್-2 ಕಾರ್ಯಕ್ರಮಕ್ಕೆ ಜೆಡಿಎಸ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ಕುರಿತಂತೆ ಜಡಿಎಸ್ನ ರಾಜ್ಯ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಪಿ.ಪ್ರದೀಪ್ ಕುಮಾರ್ ಮುಖ್ಯ ಚುನಾವಣಾ ಅಧಿಕಾರಿಗೆ ಭಾನುವಾರ ಲಿಖಿತ ದೂರು ಸಲ್ಲಿಸಿದ್ದಾರೆ.
'ಈ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ನಿರ್ಣಾಯಕರಾಗಿದ್ದಾರೆ. ಪ್ರಸ್ತುತ ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿದ್ದಾರೆ. ಆದ್ದರಿಂದ, ವಾಹಿನಿ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ದೂರಿನಲ್ಲಿ ಕೋರಲಾಗಿದೆ.