ವಿಧಾನಪರಿಷತ್ತಿನಲ್ಲಿ ಬುಧವಾರ ಮಾತನಾಡಿದ ಪುಟ್ಟಸ್ವಾಮಿ, ‘ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆ ಮುಕ್ತಾಯಗೊಳಿಸುವಾಗ ಸಿದ್ದರಾಮಯ್ಯ, ಈ ಯೋಜನೆಗೆ ಪ್ರತಿ ವರ್ಷ ₹10 ಸಾವಿರ ಕೋಟಿ ನೀಡುವುದಾಗಿ ಕೂಡಲ ಸಂಗಮದಲ್ಲಿ ಭರವಸೆ ನೀಡಿದ್ದರು. ಆದರೆ, ಸರ್ಕಾರ ಐದು ವರ್ಷಗಳಲ್ಲಿ ಈ ಯೋಜನೆಗೆ ₹12,897 ಕೋಟಿ ಮಾತ್ರ ವೆಚ್ಚ ಮಾಡಿದೆ’ ಎಂದರು.