<p><strong>ವಿಜಯಪುರ:</strong> ‘ಬಳ್ಳಾರಿಯಲ್ಲಿನ ಭ್ರಷ್ಟಾಚಾರ, ಅದಿರು ಅಕ್ರಮ ಸಾಗಣೆ ಬಗ್ಗೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ– ಇಬ್ಬರಿಗೂ ನೈತಿಕತೆ ಉಳಿದಿಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಿಂದಗಿಯಲ್ಲಿ ಪ್ರತಿಕ್ರಿಯಿಸಿದರು.</p>.<p>‘ರೆಡ್ಡಿ ಸಹೋದರರನ್ನು ಮೋದಿ ಸಮರ್ಥಿಸಿಕೊಂಡಿದ್ದು, ಅವರ ಭಾಷಣಗಳಲ್ಲಿ ಯಾವುದೇ ಸ್ಥಿರತೆ ಕಂಡು ಬರುತ್ತಿಲ್ಲ’ ಎಂದು ಟೀಕಿಸಿದರು.</p>.<p>‘ಮೋದಿ ಹೇಳಿದ ಹಾಗೆ ಸಿದ್ದರಾಮಯ್ಯ ಪಕ್ಷಾಂತರಿ. ಚುನಾವಣೆ ಫಲಿತಾಂಶದಲ್ಲಿ ಅತಂತ್ರ ಪರಿಸ್ಥಿತಿ ಬಂದರೆ ಮುಖ್ಯಮಂತ್ರಿ ನೇತೃತ್ವದಲ್ಲಿ 50–60 ಶಾಸಕರು ಬಿಜೆಪಿಯವರ ಮನೆ ಬಾಗಿಲು ತಟ್ಟಿದರೂ ಆಶ್ಚರ್ಯ ಪಡಬೇಕಿಲ್ಲ’ ಎಂದು ಹೇಳಿದರು.</p>.<p>ಐದು ವರ್ಷಗಳ ಹಿಂದೆ ಬಳ್ಳಾರಿಗೆ ಪಾದಯಾತ್ರೆ ನಡೆಸಿದ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಅಲ್ಲಿನ ಅಭಿವೃದ್ಧಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.</p>.<p>ಜೆಡಿಎಸ್ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ದೇವೇಗೌಡರನ್ನು ಪ್ರಶ್ನಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಜೆಡಿಎಸ್, ಬಿಜೆಪಿ ಪರವೂ ಇಲ್ಲ. ಕಾಂಗ್ರೆಸ್ಸಿಗರ ಕಡೆಗೂ ಇಲ್ಲ. ಎಂದೆಂದೂ ಕನ್ನಡಿಗರ ಪರವಾಗಿರಲಿದೆ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ‘ಬಳ್ಳಾರಿಯಲ್ಲಿನ ಭ್ರಷ್ಟಾಚಾರ, ಅದಿರು ಅಕ್ರಮ ಸಾಗಣೆ ಬಗ್ಗೆ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ– ಇಬ್ಬರಿಗೂ ನೈತಿಕತೆ ಉಳಿದಿಲ್ಲ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸಿಂದಗಿಯಲ್ಲಿ ಪ್ರತಿಕ್ರಿಯಿಸಿದರು.</p>.<p>‘ರೆಡ್ಡಿ ಸಹೋದರರನ್ನು ಮೋದಿ ಸಮರ್ಥಿಸಿಕೊಂಡಿದ್ದು, ಅವರ ಭಾಷಣಗಳಲ್ಲಿ ಯಾವುದೇ ಸ್ಥಿರತೆ ಕಂಡು ಬರುತ್ತಿಲ್ಲ’ ಎಂದು ಟೀಕಿಸಿದರು.</p>.<p>‘ಮೋದಿ ಹೇಳಿದ ಹಾಗೆ ಸಿದ್ದರಾಮಯ್ಯ ಪಕ್ಷಾಂತರಿ. ಚುನಾವಣೆ ಫಲಿತಾಂಶದಲ್ಲಿ ಅತಂತ್ರ ಪರಿಸ್ಥಿತಿ ಬಂದರೆ ಮುಖ್ಯಮಂತ್ರಿ ನೇತೃತ್ವದಲ್ಲಿ 50–60 ಶಾಸಕರು ಬಿಜೆಪಿಯವರ ಮನೆ ಬಾಗಿಲು ತಟ್ಟಿದರೂ ಆಶ್ಚರ್ಯ ಪಡಬೇಕಿಲ್ಲ’ ಎಂದು ಹೇಳಿದರು.</p>.<p>ಐದು ವರ್ಷಗಳ ಹಿಂದೆ ಬಳ್ಳಾರಿಗೆ ಪಾದಯಾತ್ರೆ ನಡೆಸಿದ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ನಂತರ ಅಲ್ಲಿನ ಅಭಿವೃದ್ಧಿಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.</p>.<p>ಜೆಡಿಎಸ್ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ದೇವೇಗೌಡರನ್ನು ಪ್ರಶ್ನಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಜೆಡಿಎಸ್, ಬಿಜೆಪಿ ಪರವೂ ಇಲ್ಲ. ಕಾಂಗ್ರೆಸ್ಸಿಗರ ಕಡೆಗೂ ಇಲ್ಲ. ಎಂದೆಂದೂ ಕನ್ನಡಿಗರ ಪರವಾಗಿರಲಿದೆ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>