ಬೆಂಗಳೂರಿನಲ್ಲಿ ಸಾಕಷ್ಟು ಹವ್ಯಾಸಿ ರಂಗತಂಡಗಳಿವೆ. ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಕಲಾವಿದರು, ತಂತ್ರಜ್ಞರು, ಬರಹಗಾರರು, ನೇಪಥ್ಯ ಕಲಾವಿದರು ಹೀಗೆ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಎಲ್ಲರನ್ನು ಒಟ್ಟುಗೂಡಿಸುವ ಸಲುವಾಗಿ ವಿಶ್ವಪಥ ಕಲಾ ಸಂಗಮ ತಂಡವು ಬಸವನಗುಡಿಯಲ್ಲಿರುವ ಎಪಿಎಸ್ ಕಾಲೇಜು ಮೈದಾನದಲ್ಲಿ ರಂಗಭೂಮಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದೆ. ಹದಿನಾರು ರಂಗ ತಂಡಗಳು ಭಾಗವಹಿಸುತ್ತಿವೆ.