<p>ಧಾರವಾಡ: ‘ಪಾಲಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪೂರಕ ವಾತಾವರಣ ನಿರ್ಮಿಸಬೇಕು. ಆಗ ಮಾತ್ರ ಮಕ್ಕಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ’ ಎಂದು ಆಕಾಶವಾಣಿ ನಿವೃತ್ತ ಅಧಿಕಾರಿ ಬಸು ಬೇವಿನಗಿಡದ ಹೇಳಿದರು.</p>.<p>ನಗರದ ರಂಗಾಯಣದ ಪಂಡಿತ ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಶನಿವಾರ ನಡೆದ ‘ಅಭಿನಯ-ಅಭಿವ್ಯಕ್ತಿ’ ಧ್ಯೇಯವಾಕ್ಯದಡಿ ಆಯೋಜಿಸಿದ್ದ ‘ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಹಾಗೂ ಚಿಣ್ಣರ ನಾಟಕೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ರಂಗಭೂಮಿ ಎಂದರೆ ಸಾಹಿತ್ಯದ ಭಂಡಾರ. ಅದರಲ್ಲಿ ಅಭಿನಯ, ಅಕ್ಷರಗಳ ಉಚ್ಛರಣೆ, ಪದಗಳನ್ನು ಬಳಸುವ ಬಗೆ, ಭಾವವನ್ನು ವ್ಯಕ್ತಪಡಿಸುವ ವಿಧಾನ ಎಲ್ಲವೂ ಇದೆ. ಇಂತಹ ರಂಗಕಲೆಯನ್ನು ರೂಢಿಸಿಕೊಳ್ಳುವ ಮಕ್ಕಳು ಉತ್ತಮ ಜೀವನವನ್ನು ರೂಪಿಸಿಕೊಳ್ಳುತ್ತಾರೆ’ ಎಂದು ಅಭಿಪ್ರಾಯಪಟ್ಟರು.</p>.<p>‘ರಂಗಾಯಣವು ಮಕ್ಕಳಲ್ಲಿ ಹುದುಗಿರುವ ಸಾಂಸ್ಕೃತಿಕ ಕಲೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ’ ಎಂದರು.</p>.<p>ರಂಗಾಯಣ ನಿರ್ದೇಶಕ ಝಕೀರ ನದಾಫ್ ಮಾತನಾಡಿ, ‘ರಂಗಭೂಮಿಯು ಪರಿಣಾಮಕಾರಿ ಮಾಧ್ಯಮವಾಗಿದೆ. ಇಲ್ಲಿ ನೀಡುವ ತರಬೇತಿ, ಚಟುವಟಿಕೆಗಳು ಕೇವಲ ಜೀವನವನ್ನು ರೂಪಿಸುವುದಲ್ಲದೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡುತ್ತದೆ. ಆದ್ದರಿಂದ ಮಕ್ಕಳಿಗೆ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಲು ಪಾಲಕರು ಉತ್ತೇಜನ ನೀಡಬೇಕು’ ಎಂದು ಹೇಳಿದರು.</p>.<p>ಚಿಣ್ಣರ ಮೇಳದ ಕಿರುಹೊತ್ತಿಗೆ ಬಿಡುಗಡೆಗೊಳಿಸಲಾಯಿತು. ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ, ಚಿಣ್ಣರಮೇಳದ ಸಂಚಾಲಕ ಅರುಣಕುಮಾರ ಮೇದಾರ, ತರಬೇತುದಾರ ರಾಜ್ ಕವಡೆನವರ, ಸುನಂದಾ ನಿಂಬನಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-24-167867684</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ಪಾಲಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪೂರಕ ವಾತಾವರಣ ನಿರ್ಮಿಸಬೇಕು. ಆಗ ಮಾತ್ರ ಮಕ್ಕಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ’ ಎಂದು ಆಕಾಶವಾಣಿ ನಿವೃತ್ತ ಅಧಿಕಾರಿ ಬಸು ಬೇವಿನಗಿಡದ ಹೇಳಿದರು.</p>.<p>ನಗರದ ರಂಗಾಯಣದ ಪಂಡಿತ ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಶನಿವಾರ ನಡೆದ ‘ಅಭಿನಯ-ಅಭಿವ್ಯಕ್ತಿ’ ಧ್ಯೇಯವಾಕ್ಯದಡಿ ಆಯೋಜಿಸಿದ್ದ ‘ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಹಾಗೂ ಚಿಣ್ಣರ ನಾಟಕೋತ್ಸವ’ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಕ್ಕಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ರಂಗಭೂಮಿ ಎಂದರೆ ಸಾಹಿತ್ಯದ ಭಂಡಾರ. ಅದರಲ್ಲಿ ಅಭಿನಯ, ಅಕ್ಷರಗಳ ಉಚ್ಛರಣೆ, ಪದಗಳನ್ನು ಬಳಸುವ ಬಗೆ, ಭಾವವನ್ನು ವ್ಯಕ್ತಪಡಿಸುವ ವಿಧಾನ ಎಲ್ಲವೂ ಇದೆ. ಇಂತಹ ರಂಗಕಲೆಯನ್ನು ರೂಢಿಸಿಕೊಳ್ಳುವ ಮಕ್ಕಳು ಉತ್ತಮ ಜೀವನವನ್ನು ರೂಪಿಸಿಕೊಳ್ಳುತ್ತಾರೆ’ ಎಂದು ಅಭಿಪ್ರಾಯಪಟ್ಟರು.</p>.<p>‘ರಂಗಾಯಣವು ಮಕ್ಕಳಲ್ಲಿ ಹುದುಗಿರುವ ಸಾಂಸ್ಕೃತಿಕ ಕಲೆಗಳನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ’ ಎಂದರು.</p>.<p>ರಂಗಾಯಣ ನಿರ್ದೇಶಕ ಝಕೀರ ನದಾಫ್ ಮಾತನಾಡಿ, ‘ರಂಗಭೂಮಿಯು ಪರಿಣಾಮಕಾರಿ ಮಾಧ್ಯಮವಾಗಿದೆ. ಇಲ್ಲಿ ನೀಡುವ ತರಬೇತಿ, ಚಟುವಟಿಕೆಗಳು ಕೇವಲ ಜೀವನವನ್ನು ರೂಪಿಸುವುದಲ್ಲದೆ ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ನೀಡುತ್ತದೆ. ಆದ್ದರಿಂದ ಮಕ್ಕಳಿಗೆ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಲು ಪಾಲಕರು ಉತ್ತೇಜನ ನೀಡಬೇಕು’ ಎಂದು ಹೇಳಿದರು.</p>.<p>ಚಿಣ್ಣರ ಮೇಳದ ಕಿರುಹೊತ್ತಿಗೆ ಬಿಡುಗಡೆಗೊಳಿಸಲಾಯಿತು. ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ, ಚಿಣ್ಣರಮೇಳದ ಸಂಚಾಲಕ ಅರುಣಕುಮಾರ ಮೇದಾರ, ತರಬೇತುದಾರ ರಾಜ್ ಕವಡೆನವರ, ಸುನಂದಾ ನಿಂಬನಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260510-24-167867684</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>