<p>ಧಾರವಾಡ: ‘ರಂಗಭೂಮಿಯು ನಾಟಕ, ಸಂಗೀತ ಹಾಗೂ ಸಾಹಿತ್ಯದ ಜ್ಞಾನ ನೀಡುತ್ತದೆ. ಸಾಂಸ್ಕೃತಿಕ, ಸಿನಿಮಾ ರಂಗದ ಕಲಾವಿದರು ಹಾಗೂ ತಂತ್ರಜ್ಞರ ಬೆಳವಣಿಗೆಗೆ ಅದುವೇ ಬುನಾದಿ’ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.</p>.<p>ನಗರದ ರಂಗಾಯಣದಲ್ಲಿ ಆಯೋಜಿಸಿರುವ ಬೇಸಿಗೆ ಶಿಬಿರದಲ್ಲಿ ಗುರುವಾರ ಮಾತನಾಡಿದ ಅವರು, ‘ರಂಗಭೂಮಿಯಲ್ಲಿ ಕಲಾವಿದರು ಸಕ್ರಿಯವಾಗಿ ತೊಡಗಿಸಿಕೊಂಡರೆ ಟಿವಿ, ಸಿನಿಮಾಗಳಲ್ಲಿ ಅವಕಾಶಗಳು ಸಿಗುತ್ತವೆ. ಅಂಥ ಶಕ್ತಿ ರಂಗಭೂಮಿಗೆ ಇದೆ. ಯುವಜನರು ಸಿನಿಮಾವನ್ನಷ್ಟೇ ಕೇಂದ್ರಿಕರಿಸಿದ್ದಾರೆ’ ಎಂದರು.</p>.<p>‘ಮಕ್ಕಳು ಸಾಧನೆ ಮಾಡಬೇಕು ಎಂಬುದು ಎಲ್ಲ ಪೋಷಕರ ಆಶಯ. ಮಕ್ಕಳ ಮೇಲೆ ಒತ್ತಡ ಹೇರಬಾರದು. ಆಯ್ಕೆಗೆ ಅವಕಾಶ ನೀಡಬೇಕು. ಅವರ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಬೇಕು’ ಎಂದರು.</p>.<p>ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕ ಝಕೀರ ನದಾಫ, ಶಿಬಿರದ ಸಂಚಾಲಕ ಅರುಣಕುಮಾರ ಮೇದಾರ, ಸಂಗೀತಗಾರ್ತಿ ಸುನಂದಾ ನಿಂಬನಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-24-1074459281</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ‘ರಂಗಭೂಮಿಯು ನಾಟಕ, ಸಂಗೀತ ಹಾಗೂ ಸಾಹಿತ್ಯದ ಜ್ಞಾನ ನೀಡುತ್ತದೆ. ಸಾಂಸ್ಕೃತಿಕ, ಸಿನಿಮಾ ರಂಗದ ಕಲಾವಿದರು ಹಾಗೂ ತಂತ್ರಜ್ಞರ ಬೆಳವಣಿಗೆಗೆ ಅದುವೇ ಬುನಾದಿ’ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.</p>.<p>ನಗರದ ರಂಗಾಯಣದಲ್ಲಿ ಆಯೋಜಿಸಿರುವ ಬೇಸಿಗೆ ಶಿಬಿರದಲ್ಲಿ ಗುರುವಾರ ಮಾತನಾಡಿದ ಅವರು, ‘ರಂಗಭೂಮಿಯಲ್ಲಿ ಕಲಾವಿದರು ಸಕ್ರಿಯವಾಗಿ ತೊಡಗಿಸಿಕೊಂಡರೆ ಟಿವಿ, ಸಿನಿಮಾಗಳಲ್ಲಿ ಅವಕಾಶಗಳು ಸಿಗುತ್ತವೆ. ಅಂಥ ಶಕ್ತಿ ರಂಗಭೂಮಿಗೆ ಇದೆ. ಯುವಜನರು ಸಿನಿಮಾವನ್ನಷ್ಟೇ ಕೇಂದ್ರಿಕರಿಸಿದ್ದಾರೆ’ ಎಂದರು.</p>.<p>‘ಮಕ್ಕಳು ಸಾಧನೆ ಮಾಡಬೇಕು ಎಂಬುದು ಎಲ್ಲ ಪೋಷಕರ ಆಶಯ. ಮಕ್ಕಳ ಮೇಲೆ ಒತ್ತಡ ಹೇರಬಾರದು. ಆಯ್ಕೆಗೆ ಅವಕಾಶ ನೀಡಬೇಕು. ಅವರ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಬೇಕು’ ಎಂದರು.</p>.<p>ರಂಗಾಯಣದ ಆಡಳಿತಾಧಿಕಾರಿ ಶಶಿಕಲಾ ಹುಡೇದ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕ ಝಕೀರ ನದಾಫ, ಶಿಬಿರದ ಸಂಚಾಲಕ ಅರುಣಕುಮಾರ ಮೇದಾರ, ಸಂಗೀತಗಾರ್ತಿ ಸುನಂದಾ ನಿಂಬನಗೌಡರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-24-1074459281</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>