<p>ಹುಬ್ಬಳ್ಳಿ: ‘ರಂಗಭೂಮಿ ಬದುಕಿನ ಪಾಠಶಾಲೆ ಇದ್ದಂತೆ’ ಎಂದು ಕೆಎಲ್ಇ ಆಸ್ಪತ್ರೆ ನಿರ್ದೇಶಕ ಡಾ. ಎಂ.ಜಿ. ಹಿರೇಮಠ ಅಭಿಪ್ರಾಯಪಟ್ಟರು.</p>.<p>ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸುನಿಧಿ ಕಲಾ ಸೌರಭ ವತಿಯಿಂದ ಈಚೆಗೆ ಆಯೋಜಿಸಿದ್ದ ‘ರಂಗ ಸೌರಭ’ ಪುರಸ್ಕಾರ ಪ್ರದಾನ ಹಾಗೂ ‘ಅನಾಥರ ಮಾಯಿ’ ನಾಟಕ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ರಂಗಭೂಮಿಯು ಎಲ್ಲ ಕಲೆಗಳ ತಾಯಿ. ಸಾಮಾಜಿಕ ಬದಲಾವಣೆಗಳಿಗೆ ರಂಗಭೂಮಿ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ಜನರಲ್ಲಿ ರಂಗಭೂಮಿ ಬಗೆಗಿನ ಆಸಕ್ತಿ ಕಡಿಮೆಯಾಗುತ್ತಿದೆ. ಯುವಕರನ್ನು ರಂಗಭೂಮಿಯತ್ತ ಸೆಳೆದು ಹೊಸ ಪ್ರೇಕ್ಷಕರನ್ನು ಸೃಷ್ಟಿಸುವ ಕೆಲಸ ಆಗಬೇಕು ’ ಎಂದು ತಿಳಿಸಿದರು.</p>.<p>ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಂಡು ಕುಲಕರ್ಣಿ, ಸಿದ್ಧಾರೂಢ ಮಠದ ಟ್ರಸ್ಟ್ ಕಮಿಟಿ ಚೇರ್ಮನ್ ಚನ್ನವೀರ ಮುಂಗರವಾಡಿ, ಗೋವಿಂದ ಮಣ್ಣೂರ ಮಾತನಾಡಿದರು.</p>.<p>ಡಾ. ಎಂ.ಜಿ. ಹಿರೇಮಠ ಹಾಗೂ ಭರತನಾಟ್ಯ ಪ್ರವೀಣ ವಿದ್ವಾನ್ ಸುಜಯ ಶಾನಭಾಗ ಅವರಿಗೆ ‘ರಂಗ ಸೌರಭ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಸುನಿಧಿ ಕಲಾ ಸೌರಭದ ಅಧ್ಯಕ್ಷ ಸುಭಾಸ ನರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಸಂತೋಷ ಮೋಕಾಶಿ, ವೀಣಾ ಅಠವಲೆ, ಸತೀಶ ಮೂರೂರು, ಕೀರ್ತಿವತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-24-2041937134</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ‘ರಂಗಭೂಮಿ ಬದುಕಿನ ಪಾಠಶಾಲೆ ಇದ್ದಂತೆ’ ಎಂದು ಕೆಎಲ್ಇ ಆಸ್ಪತ್ರೆ ನಿರ್ದೇಶಕ ಡಾ. ಎಂ.ಜಿ. ಹಿರೇಮಠ ಅಭಿಪ್ರಾಯಪಟ್ಟರು.</p>.<p>ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸುನಿಧಿ ಕಲಾ ಸೌರಭ ವತಿಯಿಂದ ಈಚೆಗೆ ಆಯೋಜಿಸಿದ್ದ ‘ರಂಗ ಸೌರಭ’ ಪುರಸ್ಕಾರ ಪ್ರದಾನ ಹಾಗೂ ‘ಅನಾಥರ ಮಾಯಿ’ ನಾಟಕ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ರಂಗಭೂಮಿಯು ಎಲ್ಲ ಕಲೆಗಳ ತಾಯಿ. ಸಾಮಾಜಿಕ ಬದಲಾವಣೆಗಳಿಗೆ ರಂಗಭೂಮಿ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ಜನರಲ್ಲಿ ರಂಗಭೂಮಿ ಬಗೆಗಿನ ಆಸಕ್ತಿ ಕಡಿಮೆಯಾಗುತ್ತಿದೆ. ಯುವಕರನ್ನು ರಂಗಭೂಮಿಯತ್ತ ಸೆಳೆದು ಹೊಸ ಪ್ರೇಕ್ಷಕರನ್ನು ಸೃಷ್ಟಿಸುವ ಕೆಲಸ ಆಗಬೇಕು ’ ಎಂದು ತಿಳಿಸಿದರು.</p>.<p>ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಂಡು ಕುಲಕರ್ಣಿ, ಸಿದ್ಧಾರೂಢ ಮಠದ ಟ್ರಸ್ಟ್ ಕಮಿಟಿ ಚೇರ್ಮನ್ ಚನ್ನವೀರ ಮುಂಗರವಾಡಿ, ಗೋವಿಂದ ಮಣ್ಣೂರ ಮಾತನಾಡಿದರು.</p>.<p>ಡಾ. ಎಂ.ಜಿ. ಹಿರೇಮಠ ಹಾಗೂ ಭರತನಾಟ್ಯ ಪ್ರವೀಣ ವಿದ್ವಾನ್ ಸುಜಯ ಶಾನಭಾಗ ಅವರಿಗೆ ‘ರಂಗ ಸೌರಭ’ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಸುನಿಧಿ ಕಲಾ ಸೌರಭದ ಅಧ್ಯಕ್ಷ ಸುಭಾಸ ನರೇಂದ್ರ ಅಧ್ಯಕ್ಷತೆ ವಹಿಸಿದ್ದರು. ಸಂತೋಷ ಮೋಕಾಶಿ, ವೀಣಾ ಅಠವಲೆ, ಸತೀಶ ಮೂರೂರು, ಕೀರ್ತಿವತಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260401-24-2041937134</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>