<p>ಕಾರವಾರ: ‘ಕನ್ನಡ ಸಾಹಿತ್ಯ ಪರಿಷತ್ನ್ನು ಸ್ಥಾಪಿಸಿದ ನಾಡಿನ ಹಿರಿಯರ ಆಶಯಕ್ಕೆ ಧಕ್ಕೆ ಬರದಂತೆ ಸಂಸ್ಥೆ ಮುನ್ನಡೆಸುವ ಜವಾಬ್ದಾರಿ ಸರಿಯಾಗಿ ನಿಭಾಯಿಸುವ ಕೆಲಸ ಆಗಬೇಕಿದೆ’ ಎಂದು ರಂಗಭೂಮಿ ಕಲಾವಿದರ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ನಾಯ್ಕ ಹೇಳಿದರು.</p>.<p>ಇಲ್ಲಿನ ಕನ್ನಡ ಭವನದಲ್ಲಿ ಈಚೆಗೆ ಕಸಾಪ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಮಾತನಾಡಿ, ‘ನಾವು ಹೆಗಲ ಮೇಲೆ ಹಾಕಿಕೊಳ್ಳುವ ಕನ್ನಡದ ಶಾಲಿಗೆ ಈ ಹಿಂದೆ ಇದ್ದ ಘನತೆ, ಗೌರವ ಇಂದು ಉಳಿದಿಲ್ಲ. ಸಾಹಿತ್ಯ ಪರಿಷತ್ ಸಾಹಿತ್ಯಿಕ ಚಟುವಟಿಕೆಯ ಜೊತೆಗೆ ಸಮಾಜಕ್ಕೆ ಮಾರ್ಗದರ್ಶಿಯಾಗುವ ಕೆಲಸ ಮಾಡಬೇಕಿದೆ’ ಎಂದರು.</p>.<p>ನಿವೃತ್ತ ಪ್ರಾಚಾರ್ಯ ಆರ್.ಎಸ್. ಹಬ್ಬು, ‘ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯುವಕರಿಗೆ ಹೆಚ್ಚು ಸದಸ್ಯರನ್ನಾಗಿ ಮಾಡಿಕೊಂಡು ಮುಂದಿನ ಪೀಳಿಗೆಗೆ ಜವಾಬ್ದಾರಿ ಕೊಡಬೇಕು’ ಎಂದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಪಿ.ಎಸ್.ರಾಣೆ, ಕಸಾಪ ಪದಾಧಿಕಾರಿಗಳಾದ ಶಿವಾನಂದ ತಾಂಡೇಲ, ಜಿ.ಡಿ.ಮನೋಜೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-20-1262439266</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ‘ಕನ್ನಡ ಸಾಹಿತ್ಯ ಪರಿಷತ್ನ್ನು ಸ್ಥಾಪಿಸಿದ ನಾಡಿನ ಹಿರಿಯರ ಆಶಯಕ್ಕೆ ಧಕ್ಕೆ ಬರದಂತೆ ಸಂಸ್ಥೆ ಮುನ್ನಡೆಸುವ ಜವಾಬ್ದಾರಿ ಸರಿಯಾಗಿ ನಿಭಾಯಿಸುವ ಕೆಲಸ ಆಗಬೇಕಿದೆ’ ಎಂದು ರಂಗಭೂಮಿ ಕಲಾವಿದರ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ ನಾಯ್ಕ ಹೇಳಿದರು.</p>.<p>ಇಲ್ಲಿನ ಕನ್ನಡ ಭವನದಲ್ಲಿ ಈಚೆಗೆ ಕಸಾಪ ತಾಲ್ಲೂಕು ಘಟಕದಿಂದ ಹಮ್ಮಿಕೊಂಡಿದ್ದ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಮಾತನಾಡಿ, ‘ನಾವು ಹೆಗಲ ಮೇಲೆ ಹಾಕಿಕೊಳ್ಳುವ ಕನ್ನಡದ ಶಾಲಿಗೆ ಈ ಹಿಂದೆ ಇದ್ದ ಘನತೆ, ಗೌರವ ಇಂದು ಉಳಿದಿಲ್ಲ. ಸಾಹಿತ್ಯ ಪರಿಷತ್ ಸಾಹಿತ್ಯಿಕ ಚಟುವಟಿಕೆಯ ಜೊತೆಗೆ ಸಮಾಜಕ್ಕೆ ಮಾರ್ಗದರ್ಶಿಯಾಗುವ ಕೆಲಸ ಮಾಡಬೇಕಿದೆ’ ಎಂದರು.</p>.<p>ನಿವೃತ್ತ ಪ್ರಾಚಾರ್ಯ ಆರ್.ಎಸ್. ಹಬ್ಬು, ‘ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಯುವಕರಿಗೆ ಹೆಚ್ಚು ಸದಸ್ಯರನ್ನಾಗಿ ಮಾಡಿಕೊಂಡು ಮುಂದಿನ ಪೀಳಿಗೆಗೆ ಜವಾಬ್ದಾರಿ ಕೊಡಬೇಕು’ ಎಂದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ಪಿ.ಎಸ್.ರಾಣೆ, ಕಸಾಪ ಪದಾಧಿಕಾರಿಗಳಾದ ಶಿವಾನಂದ ತಾಂಡೇಲ, ಜಿ.ಡಿ.ಮನೋಜೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-20-1262439266</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>