<p>ಸಾಗರ: ಇಲ್ಲಿನ ನಮ್ಮ ರಂಗಸ್ವರೂಪ ಟ್ರಸ್ಟ್ ಸಂಸ್ಥೆಯು ಮೇ 30ರಂದು ಸಂಜೆ 6ಕ್ಕೆ ಶಿವಮೊಗ್ಗ ರಸ್ತೆಯ ಕುಡುಪಲಿ ಸದಾನಂದ ಸ್ವರಾಲಯದಲ್ಲಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಗೀತಗಾಯನ ಕಾರ್ಯಕ್ರಮ ಆಯೋಜಿಸಿದೆ.</p>.<p>ಹಿಂದೂಸ್ತಾನಿ ಗಾಯಕಿ ವಸುಧಾ ಶರ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಂಪಿ ವಿ.ವಿ ಸಂಗೀತ ವಿಭಾಗದ ಮುಖ್ಯಸ್ಥ ವೀರೇಶ್ ಬಡಿಗೇರ್, ಕಿರಣ್ ಕೆ.ಎಸ್. ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.</p>.<p>ಮೇ 31ರಂದು ಸಂಜೆ 6.30ಕ್ಕೆ ಕನ್ನಡ ವಿವಿ ವಿದ್ಯಾರ್ಥಿಗಳು ಅಭಿನಯಿ ಸಿರುವ ‘ಜೋಕುಮಾರ ಸ್ವಾಮಿ’ (ರಚನೆ: ಚಂದ್ರಶೇಖರ ಕಂಬಾರ, ನಿರ್ದೇಶನ: ಸಿ.ಟಿ.ಬ್ರಹ್ಮಾಚಾರ್) ನಾಟಕ ಪ್ರದರ್ಶನಗೊಳ್ಳಲಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಪ್ರದರ್ಶನ ಉದ್ಘಾಟಿಸಲಿದ್ದು, ನಮ್ಮ ಎಂ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-42-987343967</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಇಲ್ಲಿನ ನಮ್ಮ ರಂಗಸ್ವರೂಪ ಟ್ರಸ್ಟ್ ಸಂಸ್ಥೆಯು ಮೇ 30ರಂದು ಸಂಜೆ 6ಕ್ಕೆ ಶಿವಮೊಗ್ಗ ರಸ್ತೆಯ ಕುಡುಪಲಿ ಸದಾನಂದ ಸ್ವರಾಲಯದಲ್ಲಿ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಗೀತಗಾಯನ ಕಾರ್ಯಕ್ರಮ ಆಯೋಜಿಸಿದೆ.</p>.<p>ಹಿಂದೂಸ್ತಾನಿ ಗಾಯಕಿ ವಸುಧಾ ಶರ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಹಂಪಿ ವಿ.ವಿ ಸಂಗೀತ ವಿಭಾಗದ ಮುಖ್ಯಸ್ಥ ವೀರೇಶ್ ಬಡಿಗೇರ್, ಕಿರಣ್ ಕೆ.ಎಸ್. ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.</p>.<p>ಮೇ 31ರಂದು ಸಂಜೆ 6.30ಕ್ಕೆ ಕನ್ನಡ ವಿವಿ ವಿದ್ಯಾರ್ಥಿಗಳು ಅಭಿನಯಿ ಸಿರುವ ‘ಜೋಕುಮಾರ ಸ್ವಾಮಿ’ (ರಚನೆ: ಚಂದ್ರಶೇಖರ ಕಂಬಾರ, ನಿರ್ದೇಶನ: ಸಿ.ಟಿ.ಬ್ರಹ್ಮಾಚಾರ್) ನಾಟಕ ಪ್ರದರ್ಶನಗೊಳ್ಳಲಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಪ್ರದರ್ಶನ ಉದ್ಘಾಟಿಸಲಿದ್ದು, ನಮ್ಮ ಎಂ.ಎಸ್.ಚಂದ್ರಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರೇಕ್ಷಕರಿಗೆ ಉಚಿತ ಪ್ರವೇಶವಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-42-987343967</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>