‘ನಾನು ಯಮ ಧರ್ಮರಾಯ. ಇಂದು ನೀನು ಮೊಬೈಲ್ನಲ್ಲಿ ಮಾತನಾಡುತ್ತಾ, ಹೆಲ್ಮೆಟ್ ತೊಡದೇ ಗಾಡಿ ಚಲಾಯಿಸಿ ನಿಯಮ ಉಲ್ಲಂಘಿಸಿದ್ದೀಯಾ. ಅಕಸ್ಮಾತ್ ಅಪಘಾತ ಸಂಭವಿಸಿ ಪ್ರಾಣಕ್ಕೆ ಹಾನಿಯಾಗಿದ್ದರೆ ಏನು ಮಾಡುತ್ತಿದ್ದೆ? ಇಂದು ನಾನು ನಿನ್ನನ್ನು ಕ್ಷಮಿಸಿದ್ದೇನೆ. ಆದರೆ, ಮುಂದಿನ ಬಾರಿ ಸಂಚಾರ ನಿಯಮ ಉಲ್ಲಂಘಿಸಿದರೆ ನಿನ್ನ ಪ್ರಾಣ ನನ್ನ ಕೈಯಲ್ಲಿರುತ್ತದೆ. ಎಚ್ಚರ. ನಿಯಮ ಪಾಲಿಸಿ ವಾಹನ ಚಲಾಯಿಸಿ’ ಎಂದು ಕಂಪನಿ ನಾಟಕ ಶೈಲಿಯಲ್ಲಿ ವಾಹನ ಸವಾರರಿಗೆ ಸಂಚಾರ ನಿಯಮ ತಿಳಿಸಿಕೊಟ್ಟರು.