ಚಿಕ್ಕವನಿದ್ದಾಗ ಗೊತ್ತಿಲ್ಲದೇ ನಡೆದ ಘಟನೆಯಿಂದಾಗಿ ತಾಯಿಯಿಂದ ಪ್ರತಿಕ್ಷಣ ದೂಷಿಸಲ್ಪಡುತ್ತಿರುವ ‘ಸೂರ್ಯ’ ಕಥಾನಾಯಕ. ಈತನ ಮಾತು ಕೊಂಚ ಒರಟು ಆದರೆ ಮೃದುವಾದ ಮನಸು. ಮತ್ತೊಂದು ಕಡೆ ಬಡತನದಲ್ಲಿದ್ದರೂ ಸದಾ ಮಂದಹಾಸವನ್ನು ಹೊಂದಿರುವ ‘ಮೀನಾ’ ಈ ಕತೆಯ ನಾಯಕಿ. ತಮ್ಮ-ತಂಗಿಯರ ವಿದ್ಯಾಭ್ಯಾಸಕ್ಕಾಗಿ ಶ್ರಮಿಸುತ್ತಿರುವ ತಾಯಿಯ ಎರಡನೇ ರೂಪ ಈ ಮೀನಾ. ಇವರಿಬ್ಬರ ಬದುಕು ಎದುರು ಬದುರಾದಾಗ ಮುಂದೇನಾಗುತ್ತದೆ ಎನ್ನುವುದೇ ಕಥೆ.
ಧಾರಾವಾಹಿಯಲ್ಲಿ ನಟ, ರಂಗಭೂಮಿ ಕಲಾವಿದರಾದ ಮಂಡ್ಯ ರಮೇಶ್ ಅವರು ಮುಖ್ಯ ಪಾತ್ರವೊಂದನ್ನು ನಿರ್ವಹಿಸುತ್ತಿದ್ದಾರೆ. ಜೊತೆಗೆ ನಿನಾದ್, ಪ್ರಿಯಾಂಕಾ, ಸ್ನೇಹಾ, ನಾಗೇಂದ್ರ ಶಾ, ಪ್ರಗತಿ, ನಂದೀಶ್, ಲಕ್ಷ್ಮಿ ಚಂದ್ರಶೇಖರ್ ಸೇರಿದಂತೆ ಹಲವು ಕಲಾವಿದರಿದ್ದಾರೆ.