ಮಧ್ಯಮ ವರ್ಗದ ಸೂಕ್ಷ್ಮ ಪ್ರಶ್ನೆಗಳಿಗೆ ಉತ್ತರ ನೀಡಲೆಂದೇ ಕಥಾನಾಯಕನ ಸ್ನೇಹಿತನಾಗಿ ಭಗವಂತ ಭೂಮಿಗೆ ಬರುತ್ತಿದ್ದಾನೆ. ನಟ - ನಿರ್ದೇಶಕ ನವೀನ್ ಕೃಷ್ಣ , ಕೃತ್ತಿಕಾ, ಹಿರಿಯ ನಟ ಉಮೇಶ್, ಬಾಲ ಕಲಾವಿದರಾದ ಅಂಕಿತಾ, ಡ್ರಾಮಾ ಜೂನಿಯರ್ಸ್ ಖ್ಯಾತಿಯ ಅನುರಾಗ್ ಮತ್ತು ಭಗವಂತನ ಪಾತ್ರದಲ್ಲಿ ಕಾರ್ತಿಕ್ ಸಾಮಗ ಕಾಣಿಸಿಕೊಂಡಿದ್ದಾರೆ . ಅಷ್ಟೇ ಅಲ್ಲದೆ ಎಮ್.ಎನ್. ಸುರೇಶ್, ಬೆಂಗಳೂರು ನಾಗೇಶ್, ಪವನ್, ಗೌತಮಿ ಸೇರಿದಂತೆ ದೊಡ್ಡ ತಾರಾ ಬಳಗ ಈ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದೆ.