<p>ಕನ್ನಡದ ಬಿಗ್ಬಾಸ್ ಸೀಸನ್ 12ಕ್ಕೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದ ಸೂರಜ್ ಸಿಂಗ್ ಕಿರುತೆರೆಯಲ್ಲಿ ನಟನಾಗಿ ಮಿಂಚಲು ಸಜ್ಜಾಗಿದ್ದಾರೆ. ಬಿಗ್ಬಾಸ್ನಿಂದ ಹೊರ ಬರುತ್ತಿದ್ದಂತೆ ಸೂರಜ್ಗೆ ಧಾರಾವಾಹಿಯಲ್ಲಿ ನಾಯಕ ನಟನಾಗಿ ನಟಿಸಲು ಅವಕಾಶ ಸಿಕ್ಕಿದೆ. </p>.ಒಲಿದ ಅದೃಷ್ಟ: ಬಿಗ್ಬಾಸ್ 12ರ ಮೊದಲ ಫೈನಲಿಸ್ಟ್ ಆಗಿ ಫಿನಾಲೆ ತಲುಪಿದ ಧನುಷ್ ಗೌಡ.ಅಚ್ಚರಿಯ ರೀತಿಯಲ್ಲಿ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಾತಿನ ಮಲ್ಲಿ ಮಲ್ಲಮ್ಮ.<p>ಈ ಮೊದಲು ಬಾಣಸಿಗನಾಗಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿದ್ದ ಸೂರಜ್ ಸಿಂಗ್, ಬಿಗ್ಬಾಸ್ ಮನೆಗೆ ಬರುತ್ತಿದ್ದಂತೆ ಎಲ್ಲವೂ ಬದಲಾಗಿಬಿಟ್ಟಿತ್ತು. ಈಗ ಕಲರ್ಸ್ ಕನ್ನಡದಲ್ಲಿ ಶುರುವಾಗುತ್ತಿರುವ ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಶೀಘ್ರದಲ್ಲೇ ಪ್ರಸಾರ ಕಾಣಲಿದೆ.</p>.<p>‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ದೇವದತ್ ದೇಶಮುಖ್ ಎಂಬ ಪಾತ್ರದಲ್ಲಿ ಸೂರಜ್ ಸಿಂಗ್ ನಟಿಸುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಅಮೂಲ್ಯ ಭಾರದ್ವಾಜ್ ಅವರು ನಟಿಸುತ್ತಿದ್ದಾರೆ. ಜೊತೆಗೆ ತಿಲಕ್ ಗೌಡ ಪಾತ್ರದಲ್ಲಿ ಯಶಸ್ ಗೌಡ ಕೂಡ ಕಾಣಿಸಿಕೊಂಡಿದ್ದಾರೆ. ದೇವದತ್ ಹಾಗೂ ತಿಲಕ್ ಇಬ್ಬರು ಅಣ್ಣ-ತಮ್ಮ ಆಗಿರುತ್ತಾರೆ. ಇಬ್ಬರೂ ಆತ್ಮೀಯರಾಗಿರುತ್ತಾರೆ. ತಿಲಕ್ ಹಾಗೂ ಪವಿತ್ರಾ ಪ್ರೀತಿಸುತ್ತಿರುತ್ತಾರೆ. ಆದರೆ ಕೊನೆಯ ಕ್ಷಣದಲ್ಲಿ ದೇವದತ್ ಅನ್ನು ಮದುವೆಯಾಗುವ ಪರಿಸ್ಥಿತಿ ಎದುರಾಗುತ್ತದೆ. ಇದು ಪವಿತ್ರ ಬಂಧನ ಧಾರಾವಾಹಿಯ ಕಥೆಯಾಗಿದೆ.</p>.<p>ಬಿಗ್ಬಾಸ್ನಿಂದ ಜನಪ್ರಿಯತೆ ಪಡೆದುಕೊಂಡ ಸೂರಜ್ ಸಿಂಗ್ ಅವರಿಗೆ ಧಾರಾವಾಹಿಯಲ್ಲಿ ಅವಕಾಶ ಸಿಕ್ಕಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಇದೇ ಅವರ ಮೊದಲ ಧಾರಾವಾಹಿ ಆಗಿರುವುದರಿಂದ ಸೂರಜ್ ಯಾವ ರೀತಿ ನಟಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡದ ಬಿಗ್ಬಾಸ್ ಸೀಸನ್ 12ಕ್ಕೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದ ಸೂರಜ್ ಸಿಂಗ್ ಕಿರುತೆರೆಯಲ್ಲಿ ನಟನಾಗಿ ಮಿಂಚಲು ಸಜ್ಜಾಗಿದ್ದಾರೆ. ಬಿಗ್ಬಾಸ್ನಿಂದ ಹೊರ ಬರುತ್ತಿದ್ದಂತೆ ಸೂರಜ್ಗೆ ಧಾರಾವಾಹಿಯಲ್ಲಿ ನಾಯಕ ನಟನಾಗಿ ನಟಿಸಲು ಅವಕಾಶ ಸಿಕ್ಕಿದೆ. </p>.ಒಲಿದ ಅದೃಷ್ಟ: ಬಿಗ್ಬಾಸ್ 12ರ ಮೊದಲ ಫೈನಲಿಸ್ಟ್ ಆಗಿ ಫಿನಾಲೆ ತಲುಪಿದ ಧನುಷ್ ಗೌಡ.ಅಚ್ಚರಿಯ ರೀತಿಯಲ್ಲಿ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಾತಿನ ಮಲ್ಲಿ ಮಲ್ಲಮ್ಮ.<p>ಈ ಮೊದಲು ಬಾಣಸಿಗನಾಗಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿದ್ದ ಸೂರಜ್ ಸಿಂಗ್, ಬಿಗ್ಬಾಸ್ ಮನೆಗೆ ಬರುತ್ತಿದ್ದಂತೆ ಎಲ್ಲವೂ ಬದಲಾಗಿಬಿಟ್ಟಿತ್ತು. ಈಗ ಕಲರ್ಸ್ ಕನ್ನಡದಲ್ಲಿ ಶುರುವಾಗುತ್ತಿರುವ ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಶೀಘ್ರದಲ್ಲೇ ಪ್ರಸಾರ ಕಾಣಲಿದೆ.</p>.<p>‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ದೇವದತ್ ದೇಶಮುಖ್ ಎಂಬ ಪಾತ್ರದಲ್ಲಿ ಸೂರಜ್ ಸಿಂಗ್ ನಟಿಸುತ್ತಿದ್ದಾರೆ. ಇವರಿಗೆ ನಾಯಕಿಯಾಗಿ ಅಮೂಲ್ಯ ಭಾರದ್ವಾಜ್ ಅವರು ನಟಿಸುತ್ತಿದ್ದಾರೆ. ಜೊತೆಗೆ ತಿಲಕ್ ಗೌಡ ಪಾತ್ರದಲ್ಲಿ ಯಶಸ್ ಗೌಡ ಕೂಡ ಕಾಣಿಸಿಕೊಂಡಿದ್ದಾರೆ. ದೇವದತ್ ಹಾಗೂ ತಿಲಕ್ ಇಬ್ಬರು ಅಣ್ಣ-ತಮ್ಮ ಆಗಿರುತ್ತಾರೆ. ಇಬ್ಬರೂ ಆತ್ಮೀಯರಾಗಿರುತ್ತಾರೆ. ತಿಲಕ್ ಹಾಗೂ ಪವಿತ್ರಾ ಪ್ರೀತಿಸುತ್ತಿರುತ್ತಾರೆ. ಆದರೆ ಕೊನೆಯ ಕ್ಷಣದಲ್ಲಿ ದೇವದತ್ ಅನ್ನು ಮದುವೆಯಾಗುವ ಪರಿಸ್ಥಿತಿ ಎದುರಾಗುತ್ತದೆ. ಇದು ಪವಿತ್ರ ಬಂಧನ ಧಾರಾವಾಹಿಯ ಕಥೆಯಾಗಿದೆ.</p>.<p>ಬಿಗ್ಬಾಸ್ನಿಂದ ಜನಪ್ರಿಯತೆ ಪಡೆದುಕೊಂಡ ಸೂರಜ್ ಸಿಂಗ್ ಅವರಿಗೆ ಧಾರಾವಾಹಿಯಲ್ಲಿ ಅವಕಾಶ ಸಿಕ್ಕಿದ್ದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಇದೇ ಅವರ ಮೊದಲ ಧಾರಾವಾಹಿ ಆಗಿರುವುದರಿಂದ ಸೂರಜ್ ಯಾವ ರೀತಿ ನಟಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>