<p><strong>ಬೆಂಗಳೂರು: </strong>‘ಬಿಗ್ ಬಾಸ್’ ರಿಯಾಲಿಟಿ ಶೋ ಮೂಲಕ ಹೆಸರು ಮಾಡಿದ್ದ ನಟಿ ಜಯಶ್ರೀ ರಾಮಯ್ಯ (32) ಅವರು ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಮಾಗಡಿ ರಸ್ತೆಯ ಕಡಬಗೆರೆ ಬಳಿ ಇರುವ ‘ಸಂಧ್ಯಾ ಕಿರಣ’ ಪುನರ್ವಸತಿ ಕೇಂದ್ರದಲ್ಲಿ ಜಯಶ್ರೀ ಉಳಿದುಕೊಂಡಿದ್ದರು. ಅದೇ ಕೇಂದ್ರದ ಕೊಠಡಿಯಲ್ಲಿ ನೇಣು ಹಾಕಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಮರಣಪತ್ರ ಸಿಕ್ಕಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ತಮ್ಮ ಮಾವನ ಬಗ್ಗೆ ಮರಣಪತ್ರದಲ್ಲಿ ಬರೆದಿರುವ ಜಯಶ್ರೀ, ಅವರ ಕ್ಷಮೆಯಾಚಿಸಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.</p>.<p>'ಜಯಶ್ರೀ ಅವರ ತಾಯಿಗೆ ಆರು ಮನೆಗಳಿದ್ದು, ಅವುಗಳನ್ನು ಬಾಡಿಗೆಗೆ ಕೊಡಲಾಗಿದೆ. ಬಾಡಿಗೆ ರೂಪದಲ್ಲಿ ಬರಬೇಕಾದ ಒಂದೂವರೆ ಲಕ್ಷ ರೂಪಾಯಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ‘ ಎಂದು ತಿಳಿಸಿವೆ.</p>.<p><strong>ಸಿನಿಮಾಗಳಲ್ಲೂ ನಟನೆ:</strong> ರೂಪದರ್ಶಿ ಆಗಿದ್ದ ಜಯಶ್ರೀ, ‘ಬಿಗ್ಬಾಸ್’ 3ನೇ ಆವೃತ್ತಿಯಲ್ಲಿ ಸ್ಪರ್ಧಿ ಆಗಿದ್ದರು. ಅದರಿಂದ ಹೊರಬಂದ ನಂತರ, ‘ಉಪ್ಪು ಹುಳಿ ಖಾರ’ ಹಾಗೂ ‘ಕನ್ನಡ್ ಗೊತ್ತಿಲ್ಲ’ ಸೇರಿದಂತೆ ಕೆಲ ಸಿನಿಮಾಗಳಲ್ಲೂ ನಟಿಸಿದ್ದರು.</p>.<p>‘ತಾಯಿಯೊಂದಿಗೆ ನೆಲೆಸಿದ್ದ ಜಯಶ್ರೀ, ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿ, ಹಲವು ಬಾರಿಗೆ ಆತ್ಮಹತ್ಯೆಗೂ ಯತ್ನಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ಸಂಧ್ಯಾ ಕಿರಣ ಕೇಂದ್ರಕ್ಕೆ ಸೇರಿಸಲಾಗಿತ್ತು. ಈ ಬಗ್ಗೆ ಸಂಬಂಧಿಕರು ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಭಾನುವಾರ ರಾತ್ರಿ ಊಟ ಮುಗಿಸಿದ್ದ ಜಯಶ್ರೀ, ಎಂದಿನಂತೆ ಕೊಠಡಿಗೆ ಹೋಗಿದ್ದರು. ಸೋಮವಾರ ಬೆಳಿಗ್ಗೆಯಾದರೂ ಕೊಠಡಿಯಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡ ಸಿಬ್ಬಂದಿ, ಕಿಟಕಿಯಲ್ಲಿ ನೋಡಿದಾಗಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡಿತ್ತು’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಬಿಗ್ ಬಾಸ್’ ರಿಯಾಲಿಟಿ ಶೋ ಮೂಲಕ ಹೆಸರು ಮಾಡಿದ್ದ ನಟಿ ಜಯಶ್ರೀ ರಾಮಯ್ಯ (32) ಅವರು ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಮಾಗಡಿ ರಸ್ತೆಯ ಕಡಬಗೆರೆ ಬಳಿ ಇರುವ ‘ಸಂಧ್ಯಾ ಕಿರಣ’ ಪುನರ್ವಸತಿ ಕೇಂದ್ರದಲ್ಲಿ ಜಯಶ್ರೀ ಉಳಿದುಕೊಂಡಿದ್ದರು. ಅದೇ ಕೇಂದ್ರದ ಕೊಠಡಿಯಲ್ಲಿ ನೇಣು ಹಾಕಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಮರಣಪತ್ರ ಸಿಕ್ಕಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ತಮ್ಮ ಮಾವನ ಬಗ್ಗೆ ಮರಣಪತ್ರದಲ್ಲಿ ಬರೆದಿರುವ ಜಯಶ್ರೀ, ಅವರ ಕ್ಷಮೆಯಾಚಿಸಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.</p>.<p>'ಜಯಶ್ರೀ ಅವರ ತಾಯಿಗೆ ಆರು ಮನೆಗಳಿದ್ದು, ಅವುಗಳನ್ನು ಬಾಡಿಗೆಗೆ ಕೊಡಲಾಗಿದೆ. ಬಾಡಿಗೆ ರೂಪದಲ್ಲಿ ಬರಬೇಕಾದ ಒಂದೂವರೆ ಲಕ್ಷ ರೂಪಾಯಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ‘ ಎಂದು ತಿಳಿಸಿವೆ.</p>.<p><strong>ಸಿನಿಮಾಗಳಲ್ಲೂ ನಟನೆ:</strong> ರೂಪದರ್ಶಿ ಆಗಿದ್ದ ಜಯಶ್ರೀ, ‘ಬಿಗ್ಬಾಸ್’ 3ನೇ ಆವೃತ್ತಿಯಲ್ಲಿ ಸ್ಪರ್ಧಿ ಆಗಿದ್ದರು. ಅದರಿಂದ ಹೊರಬಂದ ನಂತರ, ‘ಉಪ್ಪು ಹುಳಿ ಖಾರ’ ಹಾಗೂ ‘ಕನ್ನಡ್ ಗೊತ್ತಿಲ್ಲ’ ಸೇರಿದಂತೆ ಕೆಲ ಸಿನಿಮಾಗಳಲ್ಲೂ ನಟಿಸಿದ್ದರು.</p>.<p>‘ತಾಯಿಯೊಂದಿಗೆ ನೆಲೆಸಿದ್ದ ಜಯಶ್ರೀ, ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಪ್ರಕಟಿಸಿ, ಹಲವು ಬಾರಿಗೆ ಆತ್ಮಹತ್ಯೆಗೂ ಯತ್ನಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ಸಂಧ್ಯಾ ಕಿರಣ ಕೇಂದ್ರಕ್ಕೆ ಸೇರಿಸಲಾಗಿತ್ತು. ಈ ಬಗ್ಗೆ ಸಂಬಂಧಿಕರು ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಭಾನುವಾರ ರಾತ್ರಿ ಊಟ ಮುಗಿಸಿದ್ದ ಜಯಶ್ರೀ, ಎಂದಿನಂತೆ ಕೊಠಡಿಗೆ ಹೋಗಿದ್ದರು. ಸೋಮವಾರ ಬೆಳಿಗ್ಗೆಯಾದರೂ ಕೊಠಡಿಯಿಂದ ಹೊರಗೆ ಬಂದಿರಲಿಲ್ಲ. ಅನುಮಾನಗೊಂಡ ಸಿಬ್ಬಂದಿ, ಕಿಟಕಿಯಲ್ಲಿ ನೋಡಿದಾಗಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡಿತ್ತು’ ಎಂದೂ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>