ಹೌದು, ಟಾಸ್ಕ್ ಗೆಲ್ಲಲೇಬೇಕೆಂದು ಹಠದಿಂದ ಸ್ವಿಚ್ ಹಿಡಿದು ನಿಂತಿದ್ದ ಆರ್ಯವರ್ಧನ್ ಪರಿ ಪರಿಯಾಗಿ ಒದ್ದಾಡುತ್ತಿದ್ದರು. ಇದನ್ನು ಗಮನಿಸಿದ ಕಾವ್ಯಶ್ರೀ ಮೂತ್ರ ಮಾಡುವುದಿದ್ದರೆ ಅಲ್ಲೇ ಮಾಡಿಕೊಳ್ಳಿ ಎಂದು ತಮಾಷೆ ಮಾಡಿದರು. ಅದಕ್ಕೆ ಉತ್ತರಿಸಿದ ಆರ್ಯವರ್ಧನ್, ಅದಾಗಲೇ ಆಗಿದೆ ಎಂದು ಹೇಳಿದರು. ಇದಕ್ಕೆ ಮನೆಯ ಸದಸ್ಯರೆಲ್ಲ ಮುಖ ಸಿಂಡರಿಸಿ ಜೋರಾಗಿ ನಕ್ಕುಬಿಟ್ಟರು. ಸಮೀಪದಲ್ಲೇ ಇದ್ದ ವಿನೋದ್ ಗೊಬ್ಬರಗಾಲ, ಗುರುಗಳೇ ಹೊರಗಡೆ ಜನರು ನೋಡುತ್ತಿರುತ್ತಾರೆ ಅವರು ಏನೆಂದುಕೊಳ್ಳುವುದಿಲ್ಲ ನಿಮ್ಮ ಬಗ್ಗೆ ಯೋಚಿಸಿದ್ದೀರಾ? ಎಂದು ಪ್ರಶ್ನಿಸಿದರು.