<p>ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12ರ ಸ್ಪರ್ಧಿಯಾಗಿದ್ದ ಜಾಹ್ನವಿ ಅವರು ಹೊಸ ಕೆಲಸಕ್ಕೆ ಮುಂದಾಗಿದ್ದಾರೆ. ಬೀದಿಬದಿಯಲ್ಲಿ ವಾಸಿಸುತ್ತಿದ್ದ ನಿವಾಸಿಗಳ ಮನೆಗೆ ಭೇಟಿ ನೀಡಿ ಅವರಿಗೆ ಸಹಾಯ ಮಾಡಿದ್ದಾರೆ. ಇದೇ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.</p><p>ವಿಡಿಯೊ ಜೊತೆಗೆ ‘ಇತಿಹಾಸ ಹೇಳುತ್ತದೆ, ಕಳೆದು ಹೋದ ದಿನ ಸುಖವಾಗಿತ್ತು. ವಿಜ್ಞಾನ ಹೇಳುತ್ತದೆ, ನಾಳೆ ಬರುವ ದಿನ ಸುಖವಾಗಿರುತ್ತದೆ. ಆದರೆ ಧರ್ಮ ಹೇಳುತ್ತದೆ, ಸತ್ಯವಾದ ಮನಸ್ಸು ಹಾಗೂ ಸ್ವಚ್ಚವಾದ ಹೃದಯವಿದ್ದರೆ ಪ್ರತಿಕ್ಷಣವೂ ಸುಖಕರವಾಗಿರುತ್ತದೆ’ ಎಂದು ಬರೆದುಕೊಂಡಿದ್ದಾರೆ.</p>.<p>ಜಾಹ್ನವಿ ಅವರು, ಬೀದಿಬದಿಗಳಲ್ಲಿ ವಾಸಿಸುತ್ತಿದ್ದ ನಿವಾಸಿಗಳ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಬಳಿಕ ಅವರನ್ನು ಕಾರಿನಲ್ಲಿ ಕೂರಿಸಿಕೊಂಡು ದಿನಸಿ ಸಾಮಗ್ರಿಗಳು ಖರೀದಿಸಿ ಕೊಟ್ಟಿರುವುದು ವಿಡಿಯೊದಲ್ಲಿ ಕಾಣಿಸಿದೆ. </p><p>ಇದೇ ವಿಡಿಯೊ ನೋಡಿದ ನೆಟ್ಟಿಗರು, ‘ಒಳ್ಳೆಯ ಕೆಲಸ ಮಾಡುತ್ತಿದ್ದೀರಿ’, ‘ಬಡವರಿಗೆ ಇನ್ನಷ್ಟು ದಾನ ಮಾಡಿ’ ಎಂದು ಕಮೆಂಟ್ ಹಾಕಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಬಿಗ್ಬಾಸ್ನಿಂದ ಜನಪ್ರಿಯತೆ ಪಡೆದುಕೊಂಡಿರುವ ಜಾಹ್ನವಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ 2 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12ರ ಸ್ಪರ್ಧಿಯಾಗಿದ್ದ ಜಾಹ್ನವಿ ಅವರು ಹೊಸ ಕೆಲಸಕ್ಕೆ ಮುಂದಾಗಿದ್ದಾರೆ. ಬೀದಿಬದಿಯಲ್ಲಿ ವಾಸಿಸುತ್ತಿದ್ದ ನಿವಾಸಿಗಳ ಮನೆಗೆ ಭೇಟಿ ನೀಡಿ ಅವರಿಗೆ ಸಹಾಯ ಮಾಡಿದ್ದಾರೆ. ಇದೇ ವಿಡಿಯೊವನ್ನು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.</p><p>ವಿಡಿಯೊ ಜೊತೆಗೆ ‘ಇತಿಹಾಸ ಹೇಳುತ್ತದೆ, ಕಳೆದು ಹೋದ ದಿನ ಸುಖವಾಗಿತ್ತು. ವಿಜ್ಞಾನ ಹೇಳುತ್ತದೆ, ನಾಳೆ ಬರುವ ದಿನ ಸುಖವಾಗಿರುತ್ತದೆ. ಆದರೆ ಧರ್ಮ ಹೇಳುತ್ತದೆ, ಸತ್ಯವಾದ ಮನಸ್ಸು ಹಾಗೂ ಸ್ವಚ್ಚವಾದ ಹೃದಯವಿದ್ದರೆ ಪ್ರತಿಕ್ಷಣವೂ ಸುಖಕರವಾಗಿರುತ್ತದೆ’ ಎಂದು ಬರೆದುಕೊಂಡಿದ್ದಾರೆ.</p>.<p>ಜಾಹ್ನವಿ ಅವರು, ಬೀದಿಬದಿಗಳಲ್ಲಿ ವಾಸಿಸುತ್ತಿದ್ದ ನಿವಾಸಿಗಳ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಬಳಿಕ ಅವರನ್ನು ಕಾರಿನಲ್ಲಿ ಕೂರಿಸಿಕೊಂಡು ದಿನಸಿ ಸಾಮಗ್ರಿಗಳು ಖರೀದಿಸಿ ಕೊಟ್ಟಿರುವುದು ವಿಡಿಯೊದಲ್ಲಿ ಕಾಣಿಸಿದೆ. </p><p>ಇದೇ ವಿಡಿಯೊ ನೋಡಿದ ನೆಟ್ಟಿಗರು, ‘ಒಳ್ಳೆಯ ಕೆಲಸ ಮಾಡುತ್ತಿದ್ದೀರಿ’, ‘ಬಡವರಿಗೆ ಇನ್ನಷ್ಟು ದಾನ ಮಾಡಿ’ ಎಂದು ಕಮೆಂಟ್ ಹಾಕಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಬಿಗ್ಬಾಸ್ನಿಂದ ಜನಪ್ರಿಯತೆ ಪಡೆದುಕೊಂಡಿರುವ ಜಾಹ್ನವಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ. ಇನ್ಸ್ಟಾಗ್ರಾಂನಲ್ಲಿ 2 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>