<p><strong>ಬೆಂಗಳೂರು</strong>: ‘ಬಿಗ್ ಬಾಸ್’ ಕನ್ನಡ ರಿಯಾಲಿಟಿ ಷೋ ಮನೆ ಇರುವ ಬಿಡದಿಯ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ಗೆ ಜಿಲ್ಲಾಡಳಿತ ಹಾಕಿದ್ದ ಬೀಗಮುದ್ರೆ ತೆಗೆಯುವಂತೆ ನೀಡಿದ ಆದೇಶವನ್ನು ಶೋ ನಿರೂಪಕ ಕಿಚ್ಚ ಸುದೀಪ್ ಅವರು ಸ್ವಾಗತಿಸಿದ್ದಾರೆ.</p><p>ಬೀಗಮುದ್ರೆ ತೆಗೆಯುವಂತೆ ನಿರ್ದೇಶನ ನೀಡಿದ ಡಿಸಿಎಂ ಡಿಕೆಶಿ ಹಾಗೂ ಸಹಾಯ ನೀಡಿದ ಮೊಹಮ್ಮದ್ ನಲಪಾಡ್ ಅವರಿಗೆ ಸುದೀಪ್ ಧನ್ಯವಾದ ಸಲ್ಲಿಸಿದ್ದಾರೆ.</p><p>ಈ ಕುರಿತು ಡಿಸಿಎಂ ಡಿಕೆಶಿ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಸುದೀಪ್, ‘ಸಕಾಲಕ್ಕೆ ನನ್ನ ಕರೆಗೆ ಸ್ಪಂದಿಸಿದ ಗೌರವಾನ್ವಿತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಈ ಗೊಂದಲದಲ್ಲಿ ಬಿಗ್ ಬಾಸ್ ಯಾವುದೇ ರೀತಿಯಲ್ಲೂ ಭಾಗಿಯಾಗಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುವೆ. ಈ ನಿಟ್ಟಿನಲ್ಲಿ ಪ್ರಯತ್ನಿಸಿದ ನಲಪಾಡ್ ಅವರಿಗೂ ಧನ್ಯವಾದ’ ಎಂದು ತಮ್ಮ ‘ಎಕ್ಸ್’ ಖಾತೆಯಲ್ಲಿ ರಾತ್ರಿ 11.42ಕ್ಕೆ ಪೋಸ್ಟ್ ಹಾಕಿದ್ದರು.</p><p>‘ಬಿಗ್ ಬಾಸ್ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಡಿಸಿಎಂ ತಿಳಿಸಿದ್ದರು.</p><p>ಡಿಸಿಎಂ ಸೂಚನೆಯ ಬೆನ್ನಲ್ಲೇ ಕಂದಾಯ ಇಲಾಖೆಯ ಸಿಬ್ಬಂದಿ, ಜಾಲಿವುಡ್ ಸ್ಟುಡಿಯೋಸ್ಗೆ ತೆರಳಿ ಬೀಗಮುದ್ರೆ ತೆಗೆದರು. ಸಿ ಗೇಟ್ ಮಾತ್ರ ತೆಗೆಯಲಾಗಿದೆ ಎನ್ನಲಾಗಿದ್ದು, ಸ್ಟುಡಿಯೊದ ಇತರ ಚಟುವಟಿಕೆಗಳಿಗೆ ನಿರ್ಬಂಧ ಇದೆ ಎಂದು ತಿಳಿದು ಬಂದಿದೆ.</p><p>ಈಗಲ್ಟನ್ ರೆಸಾರ್ಟ್ನಲ್ಲಿದ್ದ ಬಿಗ್ ಬಾಸ್ ಸ್ಪರ್ಧಿಗಳು ಸ್ಟುಡಿಯೊಗೆ ವಾಪಸಾಗಿದ್ದು ಶೋ ಚಿತ್ರೀಕರಣ ಸರಾಗವಾಗಿ ನಡೆದಿದೆ ಎಂದು ಮೂಲಗಳು ತಿಳಿಸಿದವು.</p>.ಚುರುಮುರಿ: ಬಿಗ್ ಬಾಸ್ – ಬಿಗ್ ಲಾಸ್!.ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಬಿಗ್ ಬಾಸ್ ಮುಚ್ಚಲು ನೋಟಿಸ್: ಈಶ್ವರ ಖಂಡ್ರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬಿಗ್ ಬಾಸ್’ ಕನ್ನಡ ರಿಯಾಲಿಟಿ ಷೋ ಮನೆ ಇರುವ ಬಿಡದಿಯ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ಗೆ ಜಿಲ್ಲಾಡಳಿತ ಹಾಕಿದ್ದ ಬೀಗಮುದ್ರೆ ತೆಗೆಯುವಂತೆ ನೀಡಿದ ಆದೇಶವನ್ನು ಶೋ ನಿರೂಪಕ ಕಿಚ್ಚ ಸುದೀಪ್ ಅವರು ಸ್ವಾಗತಿಸಿದ್ದಾರೆ.</p><p>ಬೀಗಮುದ್ರೆ ತೆಗೆಯುವಂತೆ ನಿರ್ದೇಶನ ನೀಡಿದ ಡಿಸಿಎಂ ಡಿಕೆಶಿ ಹಾಗೂ ಸಹಾಯ ನೀಡಿದ ಮೊಹಮ್ಮದ್ ನಲಪಾಡ್ ಅವರಿಗೆ ಸುದೀಪ್ ಧನ್ಯವಾದ ಸಲ್ಲಿಸಿದ್ದಾರೆ.</p><p>ಈ ಕುರಿತು ಡಿಸಿಎಂ ಡಿಕೆಶಿ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಸುದೀಪ್, ‘ಸಕಾಲಕ್ಕೆ ನನ್ನ ಕರೆಗೆ ಸ್ಪಂದಿಸಿದ ಗೌರವಾನ್ವಿತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಾಗೂ ಈ ಗೊಂದಲದಲ್ಲಿ ಬಿಗ್ ಬಾಸ್ ಯಾವುದೇ ರೀತಿಯಲ್ಲೂ ಭಾಗಿಯಾಗಿಲ್ಲ ಎಂಬುದನ್ನು ಒಪ್ಪಿಕೊಂಡಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುವೆ. ಈ ನಿಟ್ಟಿನಲ್ಲಿ ಪ್ರಯತ್ನಿಸಿದ ನಲಪಾಡ್ ಅವರಿಗೂ ಧನ್ಯವಾದ’ ಎಂದು ತಮ್ಮ ‘ಎಕ್ಸ್’ ಖಾತೆಯಲ್ಲಿ ರಾತ್ರಿ 11.42ಕ್ಕೆ ಪೋಸ್ಟ್ ಹಾಕಿದ್ದರು.</p><p>‘ಬಿಗ್ ಬಾಸ್ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಆವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಡಿಸಿಎಂ ತಿಳಿಸಿದ್ದರು.</p><p>ಡಿಸಿಎಂ ಸೂಚನೆಯ ಬೆನ್ನಲ್ಲೇ ಕಂದಾಯ ಇಲಾಖೆಯ ಸಿಬ್ಬಂದಿ, ಜಾಲಿವುಡ್ ಸ್ಟುಡಿಯೋಸ್ಗೆ ತೆರಳಿ ಬೀಗಮುದ್ರೆ ತೆಗೆದರು. ಸಿ ಗೇಟ್ ಮಾತ್ರ ತೆಗೆಯಲಾಗಿದೆ ಎನ್ನಲಾಗಿದ್ದು, ಸ್ಟುಡಿಯೊದ ಇತರ ಚಟುವಟಿಕೆಗಳಿಗೆ ನಿರ್ಬಂಧ ಇದೆ ಎಂದು ತಿಳಿದು ಬಂದಿದೆ.</p><p>ಈಗಲ್ಟನ್ ರೆಸಾರ್ಟ್ನಲ್ಲಿದ್ದ ಬಿಗ್ ಬಾಸ್ ಸ್ಪರ್ಧಿಗಳು ಸ್ಟುಡಿಯೊಗೆ ವಾಪಸಾಗಿದ್ದು ಶೋ ಚಿತ್ರೀಕರಣ ಸರಾಗವಾಗಿ ನಡೆದಿದೆ ಎಂದು ಮೂಲಗಳು ತಿಳಿಸಿದವು.</p>.ಚುರುಮುರಿ: ಬಿಗ್ ಬಾಸ್ – ಬಿಗ್ ಲಾಸ್!.ಕಾನೂನಿಗಿಂತ ಯಾರೂ ದೊಡ್ಡವರಲ್ಲ; ಬಿಗ್ ಬಾಸ್ ಮುಚ್ಚಲು ನೋಟಿಸ್: ಈಶ್ವರ ಖಂಡ್ರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>