ಹೌದು, ನಾಮಿನೇಟ್ ಆಗಿರುವ ಶಮಂತ್, ಚಕ್ರವರ್ತಿ ಚಂದ್ರಚೂಡ್, ಶುಭಾ ಪೂಂಜಾ, ದಿವ್ಯಾ ಉರುಡುಗ ಮತ್ತು ಪ್ರಶಾಂತ್ ಸಂಬರಗಿಯವರ ಪೈಕಿ ಒಬ್ಬರು ಭಾನುವಾರ ಮನೆಯಿಂದ ಹೋಗಬೇಕಿತ್ತು. ಆದರೆ, ಈ ಬಾರಿ ಎಲಿಮಿನೇಶನ್ಗೆ ಟ್ವಿಸ್ಟ್ ಕೊಟ್ಟ ಸುದೀಪ್ ಇವತ್ತು ಯಾರೂ ಹೋಗುವುದಿಲ್ಲ. ಆದರೆ, ಮುಂದಿನ ಶನಿವಾರ ನಾನು ಇಲ್ಲಿಗೆ ಬರುವ ಹೊತ್ತಿಗೆ ಒಬ್ಬರು ಮನೆಯಲ್ಲಿ ಇರುವುದಿಲ್ಲ ಎನ್ನುವ ಮೂಲಕ ಟೆನ್ಷನ್ ಕೊಟ್ಟಿದ್ದಾರೆ.