<p><strong>ಬೆಂಗಳೂರು</strong>: ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ್ ಸಿದ್ಧಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ<strong> </strong>ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್ ನಿನ್ನೆ( ಶುಕ್ರವಾರ) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.</p><p>ಕಾಮಿಡಿ ಕಿಲಾಡಿ ಮೂಲಕ ಜನಪ್ರಿಯತೆ ಗಳಿಸಿದ್ದ ಚಂದ್ರಶೇಖರ್, ಕೆಲವು ಧಾರಾವಾಹಿ ಸೇರಿದಂತೆ ಸಣ್ಣಪುಟ್ಟ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ಮಿಮಿಕ್ರಿ ಕಲಾವಿದ ಸಹ ಆಗಿದ್ದರು. </p><p>ಚಿತ್ರರಂಗದಲ್ಲಿ ಅವಕಾಶಗಳು ಸಿಗದ ಕಾರಣ ಮತ್ತೆ ತಮ್ಮ ಊರಿಗೆ ವಾಪಸ್ ಆಗಿದ್ದ ಚಂದ್ರಶೇಖರ್, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.</p><p>ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಅವರು, ಚಿಕಿತ್ಸೆಯನ್ನೂ ಪಡೆದಿದ್ದರು. ಚಂದ್ರಶೇಖರ್ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಪತ್ನಿ ಜತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ್ ಸಿದ್ಧಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ<strong> </strong>ಜನಾಂಗಕ್ಕೆ ಸೇರಿದ್ದ ಚಂದ್ರಶೇಖರ್ ನಿನ್ನೆ( ಶುಕ್ರವಾರ) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.</p><p>ಕಾಮಿಡಿ ಕಿಲಾಡಿ ಮೂಲಕ ಜನಪ್ರಿಯತೆ ಗಳಿಸಿದ್ದ ಚಂದ್ರಶೇಖರ್, ಕೆಲವು ಧಾರಾವಾಹಿ ಸೇರಿದಂತೆ ಸಣ್ಣಪುಟ್ಟ ಪಾತ್ರಗಳಿಗೆ ಬಣ್ಣ ಹಚ್ಚಿದ್ದರು. ಮಿಮಿಕ್ರಿ ಕಲಾವಿದ ಸಹ ಆಗಿದ್ದರು. </p><p>ಚಿತ್ರರಂಗದಲ್ಲಿ ಅವಕಾಶಗಳು ಸಿಗದ ಕಾರಣ ಮತ್ತೆ ತಮ್ಮ ಊರಿಗೆ ವಾಪಸ್ ಆಗಿದ್ದ ಚಂದ್ರಶೇಖರ್, ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.</p><p>ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಅವರು, ಚಿಕಿತ್ಸೆಯನ್ನೂ ಪಡೆದಿದ್ದರು. ಚಂದ್ರಶೇಖರ್ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಪತ್ನಿ ಜತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>