<figcaption>""</figcaption>.<p><strong>ಮಂಗಳೂರು</strong>: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್ ನೀಡಿದ್ದು, ನಾನು ಹಾಜರಾಗಲು ಮಂಗಳೂರಿಗೆ ಹೋಗುತ್ತಿದ್ದೇನೆ. ಅವರು ವಿಚಾರಣೆಗೆ ಮಾತ್ರ ಕರೆದಿರುವುದು. ಹಾಗಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ.</p>.<p>ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮಂಗಳೂರು ಪೊಲೀಸರು ಅನುಶ್ರೀಗೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅನುಶ್ರೀ, ಬೆಳಿಗ್ಗೆ 11 ಗಂಟೆಗೆ ಮಂಗಳೂರಿಗೆ ತೆರಳಿ ವಿಚಾರಣೆಗೆ ಹಾಜರಾಗುವುದಾಗಿ ಹೇಳಿಕೊಂಡಿದ್ದಾರೆ.</p>.<p>ಕೇವಲ ವಿಚಾರಣೆಗೆ ಕರೆದಿದ್ದಾರೆ. ಆದರೆ ಕೆಲವು ಮಾಧ್ಯಮಗಳಲ್ಲಿ ನಾನು ನಟಿಸಿದ ದೃಶ್ಯಗಳನ್ನು ತೋರಿಸಿ ನನ್ನನ್ನು ಅಪರಾಧಿ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ನನ್ನನ್ನು ವಿಚಾರಣೆಗೆ ಮಾತ್ರ ಕರೆದಿದ್ದಾರೆ. ವಿಚಾರಣೆಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.</p>.<p><strong>ಪಾಂಡೇಶ್ವರ ಠಾಣೆಯಲ್ಲಿ ವಿಚಾರಣೆ: </strong>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ಅನುಶ್ರೀ ಅವರ ವಿಚಾರಣೆಯನ್ನು ಮಂಗಳೂರಿನ ಪಾಂಡೇಶ್ವರದ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ.</p>.<p>ಆರೋಪಿ ಕಿಶೋರ್, ತರುಣ್, ಅಕೀಲ್ ಅವರು ಸದ್ಯ ನಾರ್ಕೊಟಿಕ್ ಠಾಣೆಯಲ್ಲೇ ಇದ್ದು, ಅವರ ಸಮ್ಮುಖದಲ್ಲೇ ಅನುಶ್ರೀ ಅವರ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಅನುಶ್ರೀ ಅವರನ್ನು ಡಿಸಿಪಿ ವಿನಯ್ ಗಾಂವ್ಕರ್ ಅವರು ವಿಚಾರಣೆ ಮಾಡಲಿದ್ದಾರೆ.</p>.<p><strong>ಅನುಶ್ರೀ ಫೇಸ್ಬುಕ್ನಲ್ಲಿ ನೀಡಿರುವ ಪ್ರಕಟಣೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಮಂಗಳೂರು</strong>: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್ ನೀಡಿದ್ದು, ನಾನು ಹಾಜರಾಗಲು ಮಂಗಳೂರಿಗೆ ಹೋಗುತ್ತಿದ್ದೇನೆ. ಅವರು ವಿಚಾರಣೆಗೆ ಮಾತ್ರ ಕರೆದಿರುವುದು. ಹಾಗಂದ ಮಾತ್ರಕ್ಕೆ ನಾನು ಅಪರಾಧಿಯಲ್ಲ ಎಂದು ನಟಿ, ನಿರೂಪಕಿ ಅನುಶ್ರೀ ಹೇಳಿದ್ದಾರೆ.</p>.<p>ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮಂಗಳೂರು ಪೊಲೀಸರು ಅನುಶ್ರೀಗೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅನುಶ್ರೀ, ಬೆಳಿಗ್ಗೆ 11 ಗಂಟೆಗೆ ಮಂಗಳೂರಿಗೆ ತೆರಳಿ ವಿಚಾರಣೆಗೆ ಹಾಜರಾಗುವುದಾಗಿ ಹೇಳಿಕೊಂಡಿದ್ದಾರೆ.</p>.<p>ಕೇವಲ ವಿಚಾರಣೆಗೆ ಕರೆದಿದ್ದಾರೆ. ಆದರೆ ಕೆಲವು ಮಾಧ್ಯಮಗಳಲ್ಲಿ ನಾನು ನಟಿಸಿದ ದೃಶ್ಯಗಳನ್ನು ತೋರಿಸಿ ನನ್ನನ್ನು ಅಪರಾಧಿ ಎಂಬಂತೆ ಬಿಂಬಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ನನ್ನನ್ನು ವಿಚಾರಣೆಗೆ ಮಾತ್ರ ಕರೆದಿದ್ದಾರೆ. ವಿಚಾರಣೆಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.</p>.<p><strong>ಪಾಂಡೇಶ್ವರ ಠಾಣೆಯಲ್ಲಿ ವಿಚಾರಣೆ: </strong>ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರೂಪಕಿ, ಅನುಶ್ರೀ ಅವರ ವಿಚಾರಣೆಯನ್ನು ಮಂಗಳೂರಿನ ಪಾಂಡೇಶ್ವರದ ನಾರ್ಕೊಟಿಕ್ ಕ್ರೈಂ ಪೊಲೀಸ್ ಠಾಣೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ.</p>.<p>ಆರೋಪಿ ಕಿಶೋರ್, ತರುಣ್, ಅಕೀಲ್ ಅವರು ಸದ್ಯ ನಾರ್ಕೊಟಿಕ್ ಠಾಣೆಯಲ್ಲೇ ಇದ್ದು, ಅವರ ಸಮ್ಮುಖದಲ್ಲೇ ಅನುಶ್ರೀ ಅವರ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.</p>.<p>ಅನುಶ್ರೀ ಅವರನ್ನು ಡಿಸಿಪಿ ವಿನಯ್ ಗಾಂವ್ಕರ್ ಅವರು ವಿಚಾರಣೆ ಮಾಡಲಿದ್ದಾರೆ.</p>.<p><strong>ಅನುಶ್ರೀ ಫೇಸ್ಬುಕ್ನಲ್ಲಿ ನೀಡಿರುವ ಪ್ರಕಟಣೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>