<p><strong>ಬೆಂಗಳೂರು</strong>: ಹಲವು ಹಿಟ್ ಚಿತ್ರಗಳನ್ನು ನೀಡಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರು ಕಿರುತೆರೆ ರಿಯಾಲಿಟಿ ಶೋಗಳನ್ನೂ ಸೊಗಸಾಗಿ ನಡೆಸಿಕೊಡುವುದರಲ್ಲಿ ಎತ್ತಿದ ಕೈ. ಅಷ್ಟಕ್ಕೂ ಗಣೇಶ್ ಚಿತ್ರರಂಗ ಪ್ರವೇಶ ಮಾಡಲು ಕಾರಣವೇ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಟೈಮ್ಸ್‘ ಶೋ.</p>.<p>ಆ ನಂತರ ಗಣೇಶ ಅನೇಕ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡು, ಇಂದಿಗೂ ಹೊಸ ಸಿನಿಮಾಗಳಲ್ಲಿ ಲವಲವಿಕೆಯಿಂದ ತೊಡಗಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅವರು ಕಿರುತೆರೆ ರಿಯಾಲಿಟಿ ಶೋಗಳಿಂದ ದೂರ ಇದ್ದರು. ಇದೀಗ ಮತ್ತೊಂದು ಕಿರುತೆರೆ ರಿಯಾಲಿಟಿ ಶೋ ಮೂಲಕ ಪ್ರವೇಶ ಮಾಡುತ್ತಿದ್ದಾರೆ.</p>.<p>ಈ ವಿಷಯವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿರುವ ಅವರು, ‘ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ರಿಯಾಲಿಟಿ ಶೋ ಒಂದನ್ನು ನಡೆಸಿ ಕೊಡಲು ಶೀಘ್ರದಲ್ಲೇ ಬರುತ್ತಿದ್ದೇನೆ’ಎಂದು ಪ್ರೋಮೊವನ್ನು ಹಂಚಿಕೊಂಡಿದ್ದಾರೆ. ಆದರೆ, ಕಾರ್ಯಕ್ರಮ ಏನು? ಎಂಬುದರ ಬಗ್ಗೆ ಗುಟ್ಟು ಕಾಪಾಡಿಕೊಂಡಿದ್ದಾರೆ.</p>.<p>‘ಬಹಳ ದಿನಗಳ ನಂತರ ಕಿರುತೆರೆಗೆ, Zee ಕನ್ನಡದ ಮೂಲಕ ಒಂದು ಹೊಸ ರಿಯಾಲಿಟಿ ಶೋ ಜೊತೆ ಬರ್ತಿದೀನಿ.<br />ಶೀಘ್ರದಲ್ಲಿ... ನಿರೀಕ್ಷಿಸಿ’ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಜೀ ವಾಹಿನಿ ‘ಗಣಪನ ಆಗಮನ’ಎಂದು ಗಣೇಶೋತ್ಸವದ ಹಿನ್ನೆಲೆಯಲ್ಲಿಸಕತ್ ಪ್ರೋಮೊ ಬಿಡುಗಡೆ ಮಾಡಿದೆ.</p>.<p>ವೀಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಜೀ ಕನ್ನಡ ರಿಯಾಲಿಟಿ ಶೋಗಳ ಪಾಲಿಗೆ ಗಣೇಶ್ ಅವರ ಹೊಸ ಶೋ ಸೇರಿಕೊಳ್ಳುತ್ತಾ ಎಂಬುದನ್ನು ಕಾಯ್ದು ನೋಡಬೇಕಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/entertainment/cinema/injured-telugu-actor-sai-dharma-tej-is-stable-says-jubilee-hill-apollo-hospital-865602.html" target="_blank"><strong>ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ನಟ ಸಾಯಿ ಧರ್ಮ ತೇಜ್ ಪರಿಸ್ಥಿತಿ ಸದ್ಯ ಸ್ಥಿರ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹಲವು ಹಿಟ್ ಚಿತ್ರಗಳನ್ನು ನೀಡಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರು ಕಿರುತೆರೆ ರಿಯಾಲಿಟಿ ಶೋಗಳನ್ನೂ ಸೊಗಸಾಗಿ ನಡೆಸಿಕೊಡುವುದರಲ್ಲಿ ಎತ್ತಿದ ಕೈ. ಅಷ್ಟಕ್ಕೂ ಗಣೇಶ್ ಚಿತ್ರರಂಗ ಪ್ರವೇಶ ಮಾಡಲು ಕಾರಣವೇ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಟೈಮ್ಸ್‘ ಶೋ.</p>.<p>ಆ ನಂತರ ಗಣೇಶ ಅನೇಕ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡು, ಇಂದಿಗೂ ಹೊಸ ಸಿನಿಮಾಗಳಲ್ಲಿ ಲವಲವಿಕೆಯಿಂದ ತೊಡಗಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅವರು ಕಿರುತೆರೆ ರಿಯಾಲಿಟಿ ಶೋಗಳಿಂದ ದೂರ ಇದ್ದರು. ಇದೀಗ ಮತ್ತೊಂದು ಕಿರುತೆರೆ ರಿಯಾಲಿಟಿ ಶೋ ಮೂಲಕ ಪ್ರವೇಶ ಮಾಡುತ್ತಿದ್ದಾರೆ.</p>.<p>ಈ ವಿಷಯವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿರುವ ಅವರು, ‘ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ರಿಯಾಲಿಟಿ ಶೋ ಒಂದನ್ನು ನಡೆಸಿ ಕೊಡಲು ಶೀಘ್ರದಲ್ಲೇ ಬರುತ್ತಿದ್ದೇನೆ’ಎಂದು ಪ್ರೋಮೊವನ್ನು ಹಂಚಿಕೊಂಡಿದ್ದಾರೆ. ಆದರೆ, ಕಾರ್ಯಕ್ರಮ ಏನು? ಎಂಬುದರ ಬಗ್ಗೆ ಗುಟ್ಟು ಕಾಪಾಡಿಕೊಂಡಿದ್ದಾರೆ.</p>.<p>‘ಬಹಳ ದಿನಗಳ ನಂತರ ಕಿರುತೆರೆಗೆ, Zee ಕನ್ನಡದ ಮೂಲಕ ಒಂದು ಹೊಸ ರಿಯಾಲಿಟಿ ಶೋ ಜೊತೆ ಬರ್ತಿದೀನಿ.<br />ಶೀಘ್ರದಲ್ಲಿ... ನಿರೀಕ್ಷಿಸಿ’ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಜೀ ವಾಹಿನಿ ‘ಗಣಪನ ಆಗಮನ’ಎಂದು ಗಣೇಶೋತ್ಸವದ ಹಿನ್ನೆಲೆಯಲ್ಲಿಸಕತ್ ಪ್ರೋಮೊ ಬಿಡುಗಡೆ ಮಾಡಿದೆ.</p>.<p>ವೀಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಜೀ ಕನ್ನಡ ರಿಯಾಲಿಟಿ ಶೋಗಳ ಪಾಲಿಗೆ ಗಣೇಶ್ ಅವರ ಹೊಸ ಶೋ ಸೇರಿಕೊಳ್ಳುತ್ತಾ ಎಂಬುದನ್ನು ಕಾಯ್ದು ನೋಡಬೇಕಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/entertainment/cinema/injured-telugu-actor-sai-dharma-tej-is-stable-says-jubilee-hill-apollo-hospital-865602.html" target="_blank"><strong>ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ನಟ ಸಾಯಿ ಧರ್ಮ ತೇಜ್ ಪರಿಸ್ಥಿತಿ ಸದ್ಯ ಸ್ಥಿರ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>