<p>ಸ್ಟಾರ್ ಸುವರ್ಣ ವಾಹಿನಿಯಲ್ಲಿ ಫೆಬ್ರುವರಿ 3ರಿಂದ ಹೊಸದೊಂದು ಧಾರಾವಾಹಿ ಆರಂಭವಾಗುತ್ತಿದೆ. ಇದರ ಶೀರ್ಷಿಕೆ ‘ಜೀವ ಹೂವಾಗಿದೆ’. ಇದು ಸಿನಿಮಾ ನಿರ್ಮಾಣ ಸಂಸ್ಥೆ ವಜ್ರೇಶ್ವರಿ ಕಂಬೈನ್ಸ್ನ ‘ಪೂರ್ಣಿಮ ಎಂಟರ್ಪ್ರೈಸಸ್’ನವರು ಸ್ಟಾರ್ ಸುವರ್ಣ ವಾಹಿನಿಗೆ ನಿರ್ಮಾಣ ಮಾಡುತ್ತಿರುವ ಎರಡನೆಯ ಧಾರಾವಾಹಿ.</p>.<p>‘ಜೀವ ಹೂವಾಗಿದೆ ಎನ್ನುವ ಶೀರ್ಷಿಕೆ ನನಗೆ ಬಹಳ ಇಷ್ಟ. ಆದರೆ, ಜೀವವನ್ನು ಹೂವಾಗಿ ಮಾಡುವುದು ಬಹಳ ಕಷ್ಟ’ ಎಂದು ಹೇಳುತ್ತಾರೆ ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್. ವಾಹಿನಿಯವರು ಆಯೋಜಿಸಿದ್ದ ಧಾರಾವಾಹಿಯ ಪ್ರೀಮಿಯರ್ ಪ್ರದರ್ಶನಕ್ಕೆ ರಾಘಣ್ಣ ಬಂದಿದ್ದರು.</p>.<p>‘ಈ ಧಾರಾವಾಹಿ ನೋಡುವ ಜನರ ಮನಸ್ಸು ಹೂವಾದರೆ ನಮಗೆ ಖುಷಿ ಆಗುತ್ತದೆ. ಕಥೆಗೆ ಜನ ಮನಸೋತರೆ ನಾವು ಗೆದ್ದಂತೆ’ ಎನ್ನುವ ಮಾತು ಸೇರಿಸಿದರು. ಈ ಧಾರಾವಾಹಿಯನ್ನು ಜೆ.ಕೆ. ಸುನಿಲ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಶಿಲ್ಪಾ ರವಿ, ಆರ್ಯನ್ ಸೂರ್ಯ ಮತ್ತು ಅಜಯ್ ಸತ್ಯನಾರಾಯಣ ಅವರು ಮುಖ್ಯ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ‘ಪೂರ್ಣಿಮಎಂಟರ್ಪ್ರೈಸಸ್’ನವರು ಸುವರ್ಣ ವಾಹಿನಿಗಾಗಿ ನಿರ್ಮಾಣ ಮಾಡಿದ ‘ಮರಳಿ ಬಂದಳು ಸೀತೆ’ ಧಾರಾವಾಹಿ ಈಗಾಗಲೇ 280ನೆಯ ಕಂತನ್ನು ದಾಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸ್ಟಾರ್ ಸುವರ್ಣ ವಾಹಿನಿಯಲ್ಲಿ ಫೆಬ್ರುವರಿ 3ರಿಂದ ಹೊಸದೊಂದು ಧಾರಾವಾಹಿ ಆರಂಭವಾಗುತ್ತಿದೆ. ಇದರ ಶೀರ್ಷಿಕೆ ‘ಜೀವ ಹೂವಾಗಿದೆ’. ಇದು ಸಿನಿಮಾ ನಿರ್ಮಾಣ ಸಂಸ್ಥೆ ವಜ್ರೇಶ್ವರಿ ಕಂಬೈನ್ಸ್ನ ‘ಪೂರ್ಣಿಮ ಎಂಟರ್ಪ್ರೈಸಸ್’ನವರು ಸ್ಟಾರ್ ಸುವರ್ಣ ವಾಹಿನಿಗೆ ನಿರ್ಮಾಣ ಮಾಡುತ್ತಿರುವ ಎರಡನೆಯ ಧಾರಾವಾಹಿ.</p>.<p>‘ಜೀವ ಹೂವಾಗಿದೆ ಎನ್ನುವ ಶೀರ್ಷಿಕೆ ನನಗೆ ಬಹಳ ಇಷ್ಟ. ಆದರೆ, ಜೀವವನ್ನು ಹೂವಾಗಿ ಮಾಡುವುದು ಬಹಳ ಕಷ್ಟ’ ಎಂದು ಹೇಳುತ್ತಾರೆ ನಟ, ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್. ವಾಹಿನಿಯವರು ಆಯೋಜಿಸಿದ್ದ ಧಾರಾವಾಹಿಯ ಪ್ರೀಮಿಯರ್ ಪ್ರದರ್ಶನಕ್ಕೆ ರಾಘಣ್ಣ ಬಂದಿದ್ದರು.</p>.<p>‘ಈ ಧಾರಾವಾಹಿ ನೋಡುವ ಜನರ ಮನಸ್ಸು ಹೂವಾದರೆ ನಮಗೆ ಖುಷಿ ಆಗುತ್ತದೆ. ಕಥೆಗೆ ಜನ ಮನಸೋತರೆ ನಾವು ಗೆದ್ದಂತೆ’ ಎನ್ನುವ ಮಾತು ಸೇರಿಸಿದರು. ಈ ಧಾರಾವಾಹಿಯನ್ನು ಜೆ.ಕೆ. ಸುನಿಲ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಶಿಲ್ಪಾ ರವಿ, ಆರ್ಯನ್ ಸೂರ್ಯ ಮತ್ತು ಅಜಯ್ ಸತ್ಯನಾರಾಯಣ ಅವರು ಮುಖ್ಯ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ‘ಪೂರ್ಣಿಮಎಂಟರ್ಪ್ರೈಸಸ್’ನವರು ಸುವರ್ಣ ವಾಹಿನಿಗಾಗಿ ನಿರ್ಮಾಣ ಮಾಡಿದ ‘ಮರಳಿ ಬಂದಳು ಸೀತೆ’ ಧಾರಾವಾಹಿ ಈಗಾಗಲೇ 280ನೆಯ ಕಂತನ್ನು ದಾಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>