ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

BBK10: ಅಡುಗೆ ಮಾಡಲು ಗ್ಯಾಸ್ ಇಲ್ಲದೆ ಕೊರಗಿದ್ದ ಸದಸ್ಯರಿಗೆ ಕಿಚ್ಚನ ಭೂರಿ ಭೋಜನ

Published 15 ಡಿಸೆಂಬರ್ 2023, 13:36 IST
Last Updated 15 ಡಿಸೆಂಬರ್ 2023, 13:36 IST
ಅಕ್ಷರ ಗಾತ್ರ

ಬೆಂಗಳೂರು: ಬಿಗ್‌ಬಾಸ್ ಮನೆ ಸದಸ್ಯರ ನಡುವೆ ರಾಗಿಮುದ್ದೆ ವಿಷಯಕ್ಕೆ ಸಂಬಂಧಿಸಿದಂತೆ ಕೋಲಾಹಲ ಉಂಟಾಗಿತ್ತು. ಅಲ್ಲದೆ, ಮನೆಯ ಗ್ಯಾಸ್‌ ನಿಂತುಹೋಗಿತ್ತು. ರಾತ್ರಿ ಊಟದ ಕುರಿತು ಮನೆಯ ಸದಸ್ಯರೆಲ್ಲ ಕಂಗಾಲಾಗಿದ್ದರು. ರಾತ್ರಿ ಹಸಿದುಕೊಂಡೇ ಇರಬೇಕಾಗುತ್ತದೆ ಎಂಬ ಕಾರಣಕ್ಕೆ ಸದಸ್ಯರ ನಡುವೆ ಅಸಮಾಧಾನದ ಹೊಗೆಯಾಡಲಾರಂಭಿಸಿತ್ತು.

ಆದರೆ, ಬಿಗ್‌ಬಾಸ್‌ ಸ್ಪರ್ಧಿಗಳಿಗೆ ಕಿಚ್ಚನ ಕಡೆಯಿಂದ ಮರೆಯಲಾಗದಂತಹ ವಿಶೇಷ ಸರ್‌ಪ್ರೈಸ್‌ ಸಿಕ್ಕಿದೆ. ಹೌದು, ಮನೆಯ ಸದಸ್ಯರೆಲ್ಲರಿಗೂ ಕಿಚ್ಚ ಸುದೀಪ್‌ ಅವರು ತಮ್ಮ ಕೈಯಾರೆ ತಯಾರಿಸಿದ ಊಟವನ್ನು ಕಳುಹಿಸಿದ್ದಾರೆ. ಅಷ್ಟೇ ಅಲ್ಲದೆ, ಪ್ರತಿಯೊಬ್ಬರಿಗೂ ಊಟದ ಜೊತೆಗೆ ಒಂದೊಂದು ಪತ್ರವನ್ನೂ ಕಳುಹಿಸಿದ್ದಾರೆ. ಪ್ರತಿಯೊಬ್ಬ ಸ್ಪರ್ಧಿಗೂ ಅತ್ಯಮೂಲ್ಯವಾದ ಸಲಹೆಗಳನ್ನು ಕಿಚ್ಚ ಪತ್ರದ ಮೂಲಕ ತಿಳಿಸಿದ್ದಾರೆ.

ಕಿಚ್ಚ ಸುದೀಪ್‌ ಅವರ ಕಡೆಯಿಂದ ಬಂದ ಅಡುಗೆಯನ್ನು ನೋಡಿ ಮನೆ ಮಂದಿಯೆಲ್ಲ ಖುಷಿಯಿಂದ ಕುಣಿದಾಡಿದ್ದಾರೆ. ಒಬ್ಬೊಬ್ಬರೂ ಕ್ಯಾಮೆರಾ ಎದುರಿಗೆ ಬಂದು ಸುದೀಪ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇದೊಂದು ಮರೆಯಲಾಗದ ಕೊಡುಗೆ ಎಂದು ಸಂಭ್ರಮಿಸಿದ್ದಾರೆ. ಇನ್ನೂ ಕೆಲವು ಸ್ಪರ್ಧಿಗಳು ಕಿಚ್ಚನ ಸಲಹೆಯ ಪತ್ರಗಳನ್ನು ಓದಿ ಕಣ್ತುಂಬಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT